ಮನೆ ರಾಜಕೀಯ ನಟ ಶಶಿಕುಮಾರ್, ಕಾಂಗ್ರೆಸ್ ನಾಯಕ ಮುದ್ದ ಹನುಮೇಗೌಡ ಬಿಜೆಪಿ ಸೇರ್ಪಡೆ

ನಟ ಶಶಿಕುಮಾರ್, ಕಾಂಗ್ರೆಸ್ ನಾಯಕ ಮುದ್ದ ಹನುಮೇಗೌಡ ಬಿಜೆಪಿ ಸೇರ್ಪಡೆ

0

ಬೆಂಗಳೂರು(Bengaluru): ಜೆಡಿಎಸ್ ನಾಯಕ ಹಾಗೂ ನಟ ಶಶಿಕುಮಾರ್ ಮತ್ತು ತುಮಕೂರು ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮುದ್ದಹನುಮೇಗೌಡ ತಮ್ಮ ಪಕ್ಷ ತೊರೆದು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಶಶಿಕುಮಾರ್, ಮುದ್ದಹನುಮೇಗೌಡ ಹಾಗು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಸೇವಾದಳ ಉಪಾಧ್ಯಕ್ಷ ಹನುಮಂತರಾವ್, ಕಾಂಗ್ರೆಸ್ ನ ವೆಂಕಟಾಚಲಯ್ಯ, ಎಸ್ಪಿ ಪ್ರಧಾನ ಕಾರ್ಯದರ್ಶಿ, ರವಿಕುಮಾರ್, ರೈತ ಸಂಘ, ದಲಿತ ಸಂಘಟನೆ ಮುಖಂಡರು ಬಿಜೆಪಿ ಸೇರ್ಪಡೆಯಾದರು.

ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಿ ನಾಯಕರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ಮುದ್ದಹನುಮೇಗೌಡಗೆ ಕುಣಿಗಲ್ ಕ್ಷೇತ್ರ, ಜೆಡಿಎಸ್​ನಿಂದ ಬಂದ ಶಶಿಕುಮಾರ್ ಚಿತ್ರದುರ್ಗದ ಚಳ್ಳಕೆರೆ ಕ್ಷೇತ್ರ ಮತ್ತು ಬಿಬಿಎಂಪಿ ಮಾಜಿ ಆಯುಕ್ತ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೊರಟಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎನ್ನಲಾಗಿದೆ.

ಹಿಂದಿನ ಲೇಖನಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಎರಡು ಹಂತದಲ್ಲಿ ಮತದಾನ
ಮುಂದಿನ ಲೇಖನಚಾಮರಾಜನಗರದ ನಕಲಿ ಕ್ಲಿನಿಕ್’ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ: ಕ್ಲಿನಿಕ್ ಬಂದ್