ಬೆಂಗಳೂರು (Bengaluru): ಗಣೇಶ ಹಬ್ಬದ ಪ್ರಯುಕ್ತ ಮೋಹಕ ತಾರೆ ನಟಿ ರಮ್ಯಾ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡಲಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇದನ್ನು ನೋಡಿದ ಅಭಿಮಾನಿಗಳು ರಮ್ಯಾ ಅವರು ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಇತ್ತೀಚೆಗೆ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ. ಹೀಗಾಗಿ ಅಭಿಮಾನಿಗಳು ರಮ್ಯಾ ಅವರು ಕಮ್ ಬ್ಯಾಕ್ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದು, ನಾಳಿನ ಸಿಹಿ ಸುದ್ದಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
ರಮ್ಯ ಅವರು ಸಾಮಾಜಿಕ ಜಾಲತಾಣದಲ್ಲಿ, ʻಇಷ್ಟು ದಿನ ನಾನು ಸಮಯ ತೆಗೆದುಕೊಂಡಿದ್ದು ಸಾಕು ಅನಿಸುತ್ತೆ ಅಲ್ಲವಾ? ನಾನು ನಿಮ್ಮೊಂದಿಗೆ ನಾಳೆ ಬೆಳಗ್ಗೆ 11:15ಕ್ಕೆ ಸಿಹಿ ಸುದ್ದಿಯನ್ನು ಹಂಚಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಅಧಿಕೃತʼ ಎಂದು ಬರೆದುಕೊಂಡಿದ್ದಾರೆ.
ನಟಿ ರಮ್ಯಾ ಈ ಪೋಸ್ಟ್ ಹಂಚಿಕೊಂಡಿರುವುದು, ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿಯನ್ನು ಕೊಡಲು ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಇತ್ತೀಚೆಗೆ ರಮ್ಯಾ, ರಾಜ್ ಬಿ ಶೆಟ್ಟಿ ಮತ್ತು ನಟಿ ಅಮೃತಾ ಅಯ್ಯಂಗಾರ್ ಜೊತೆಗೆ ಇರುವ ಫೋಟೊ ಒಂದನ್ನು ಹಂಚಿಕೊಂಡಿದ್ದರು. ಇದಕ್ಕೂ ಮುನ್ನ ಈ ಹಿಂದೆ ರಾಜ್ ಬಿ ಶೆಟ್ಟಿ ಜೊತೆಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಇವರ ಕಾಂಬಿನೇಷನ್ನಲ್ಲಿ ಸಿನಿಮಾ ಬರಬಹುದು ಎನ್ನುವ ಚರ್ಚೆವೂ ಸೃಷ್ಟಿಯಾಗಿತ್ತು.
ನಟಿ ರಮ್ಯಾ ತಮ್ಮ ಪೋಸ್ಟ್ನಲ್ಲಿ ಸಿಹಿ ಸುದ್ದಿ ಕೊಡ್ತೀನಿ ಎಂದು ಹೇಳಿಕೊಂಡಿರುವು, ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ರಮ್ಯಾ ಈ ಪೋಸ್ಟ್ ಹಾಕಿದ ಬಳಿಕ ರಮ್ಯಾಗೆ ಶುಭಾಶಯದ ಮಹಾಪೋರವೇ ಹರಿದು ಬರ್ತಿದೆ. ರಮ್ಯಾಗೆ ಅದಾಗಲೇ ವೆಲ್ಕಂ ಬ್ಯಾಕ್ ಟು ಸ್ಯಾಂಡಲ್ವುಡ್ ಎಂದು ಶುಭಾಶಯ ಕೋರುತ್ತಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.