ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಖಂಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಅಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣಗೌಡರನ್ನು ಬಂಧಿಸಿರುವುದನ್ನು ವಿರೋಧಿಸಿ ಖಂಡಿಸುತ್ತೇವೆ. ಕನ್ನಡ ಬೇರೆಯಲ್ಲ, ನಾರಾಯಣಗೌಡರು ಬೇರೆಯಲ್ಲ. ಯಾವ ತಪ್ಪಿಗಾಗಿ ಜೈಲುವಾಸ ನಾರಾಯಣಗೌಡರಿಗೆ, ಇವತ್ತು ಕರ್ನಾಟಕದಲ್ಲಿ ಕನ್ನಡಿಗರು ಒಗ್ಗಾಟ್ಟಾಗಿ ಒಕ್ಕೊರಲಿನ ಧ್ವನಿಯಂತೆ ಕೇಳಿಸುತ್ತದೆ ಎಂದರೆ ಅದರ ಹಿಂದಿನ ಶಕ್ತಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣಗೌಡರು.
ಇಂತಹ ಕನ್ನಡ ಕಟ್ಟಾಳನ್ನು ಬಂಧಿಸಿರುವುದು ಸರ್ಕಾರಕ್ಕೆ ಶೋಭೆ ತರುವಂತಹದ್ದಲ್ಲ, ದ. ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದಂತಹವರು. ಕನ್ನಡಿಗರ ಕಷ್ಟ ಏನೆಂದು ಅವರಿಗೆ ತಿಳಿಯದ ವಿಷಯವೇನಲ್ಲ. ಹಾಗಾಗಿ ಯಾವುದೇ ಒತ್ತಡಕ್ಕೆ ಮಣಿಯದೇ ಈ ಕೂಡಲೇ ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕೆಂದು ವೇದಿಕೆ ಆಗ್ರಹಿಸುತ್ತದೆ.
ಭಾರತದಲ್ಲಿ ಪ್ರಾದೇಶಿಕ ಭಾಷಾ ಹಂಚಿಕೆಯಲ್ಲಿ ಕನ್ನಡವು ಕರ್ನಾಟಕ ಭಾಷೆಯಾಗಿ ಘೋಷಣೆಯಾದ ದಿನದಿಂದ ಕನ್ನಡಕ್ಕೆ ಅನ್ಯಾಯವಾಗುತ್ತಲೇ ಇರುವ ಸನ್ನಿವೇಶದಲ್ಲಿ ಕನ್ನಡಿಗರ ಧ್ವನಿಯನ್ನು ದಮಿನಿಸುವ ಕಾರ್ಯ ನಡೆಯುತ್ತಿರುವ ಕರ್ನಾಟಕದಲ್ಲಿ ನಾರಾಯಣಗೌಡರಂತ ಕನ್ನಡ ಸೇವಕರನ್ನು ಅವರ ಧ್ವನಿಯನ್ನು ಮುಚ್ಚಿಹಾಕುವ ಕರ್ನಾಟಕ ಸರ್ಕಾರದ ಕಾರ್ಯವನ್ನು ಈಗಲೆ ನಿಲ್ಲಿಸಿ ನಾರಾಯಣಗೌಡರನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕೆಂದು ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆಯು ಈ ಮೂಲಕ ಆಗ್ರಹಿಸುತ್ತದೆ ಎಂದಿದ್ದಾರೆ.
ಶ್ರೀ ರಾಘವೇಂದ್ರ ಸ್ವಾಮೀಜಿಗಳ ಪಟ್ಟಾಭಿಷೇಕ ನಡೆದ ಸ್ಥಳ
ಸೈನಾ ಜೊತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬ್ಯಾಡ್ಮಿಂಟನ್
ಚಾಮುಂಡೇಶ್ವರಿ ತಾಯಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದೆ
ಚಿತ್ರತಂಡದ ನಿರ್ಮಾಪಕರು ಮಂಜೇಗೌಡ ರವರ ಹುಟ್ಟುಹಬ್ಬ
ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ಹುಟ್ಟು ಹಬ್ಬ ಆಚರಣೆ
2024 29ರ ಜಿಲ್ಲಾ ಘಟಕದ ಚುನಾವಣೆ ಇದೇ ತಿಂಗಳ 21 ಭಾನುವಾರ ನಡೆಯಲಿದೆ
ಹಿನಕಲ್ ಬಸವರಾಜು ನೇತೃತ್ವದ ತಂಡದಿಂದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮತ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಎಸ್ಎಸ್ಸಿ ಪೋಸ್ಟ್ಗಳ ಭರ್ತಿಗೆ ಬೃಹತ್ ಅಧಿಸೂಚನೆ
2024 29ರ ಜಿಲ್ಲಾ ಘಟಕದ ಚುನಾವಣೆ ಇದೇ ತಿಂಗಳ 21 ಭಾನುವಾರ ನಡೆಯಲಿದೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.