ಮನೆ ರಾಜ್ಯ ಶಿವಮೊಗ್ಗ ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಶಿವಮೊಗ್ಗ ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

0

ಶಿವಮೊಗ್ಗ: ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು.

ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು.

ಹಿಂದಿನ ಲೇಖನಮೇ 9ರಂದು ‘ಕಲ್ಕಿ 2898 ಎಡಿ’ ಬಿಡುಗಡೆ
ಮುಂದಿನ ಲೇಖನಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆಯ ಸಂಗತಿ: ಸಚಿವ ಎಸ್ ಮಧು ಬಂಗಾರಪ್ಪ