ಬೆಂಗಳೂರು: ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್ ಗೆ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. 40% ಕಮಿಷನ್ ಆರೋಪವನ್ನು ನಮ್ಮ ಮೇಲೆ ಅವರು ಹೊರಿಸಿದ್ದಾರೆ. ಅದಕ್ಕೆ ಪುರಾವೆ ಸಮೇತ ತೋರಿಸಬೇಕು. ಕಾಂಗ್ರೆಸ್ ಸರ್ಕಾರ ನಾವು 40% ಕಮಿಷನ್ ತೆಗೆದುಕೊಂಡಿದ್ದೇವೆ ಎಂಬುದನ್ನು ದಾಖಲೆ ಸಹಿತ ತೋರಿಸಲಿ ಎಂದರು.
ಗುತ್ತಿಗೆದಾರರ ಸಂಘದವರೂ 40% ಕಮಿಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್ ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ ಎಂದರು.
ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ
ಗ್ಯಾರಂಟಿ ಸ್ಕೀಂ ಬಗ್ಗೆಯೂ ಬಹಳ ಜನ ಹೇಳಿದ್ದಾರೆ. ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ. ಅದರ ಬಗ್ಗೆ ಯಾವುದೋ ಬ್ಯಾಂಕ್ ನಿಂದ, ಕಂಪೆನಿಯಿಂದ ಬಂದವರ ರೀತಿ ಹೋಗಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್ ನಿಂದ ಅಂತ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದರೆ, ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್ ಅಂತಾ ಹೇಳಿದ್ದಾರೆ. ಈ ತರಹ ಮೋಸ ಮಾಡಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಎಲ್ಲವೂ ಮುಂದೆ ಬೆಳಕಿಗೆ ಬರಲಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆ ತಯಾರಿ
ಭಾನುವಾರ ಬಿಜೆಪಿ ಆತ್ಮಾವಲೋಕ ಸಭೆ ನಡೆಸಿದ್ದೇವೆ. ಎಲ್ಲ ಜಿಲ್ಲೆಗಳಿಂದ ವರದಿ ತರಿಸಿದ್ದೇವೆ. ಒಂದೊಂದು ಜಿಲ್ಲೆಗಳಲ್ಲಿ ಒಂದೊಂದು ರೀತಿ ಚುನಾವಣೆ ನಡೆದಿದೆ. ಕೆಲವು ಕಡೆ ಲೋಪದೋಷಗಳಾಗಿದ್ದು, ಸರಿಪಡಿಸಲು ತೀರ್ಮಾನ ಮಾಡಿದ್ದೇವೆ. ಮುಂದೆ ಪಕ್ಷ ಪುನರ್ ಸಂಘಟನೆ, ಲೋಕಸಭೆ ಚುನಾವಣೆ ತಯಾರಿ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಪದಾಧಿಕಾರಿಗಳು ರಾಜ್ಯ ಪ್ರವಾಸ ಮಾಡಲು ತೀರ್ಮಾನಿಸಲಾಗಿದೆ. ಚುನಾವಣೆ ಸೋಲಿಗೆ ಹಲವು ಕಾರಣಗಳನ್ನು ಕಂಡುಕೊಂಡಿದ್ದೇವೆ. ಕೆಲವು ಕಡೆ ಅಭ್ಯರ್ಥಿಗಳು ಕಾರಣ, ಕೆಲವು ಕಡೆ ಸಂಘಟನೆ ಕಾರಣ ಎನ್ನುವುದು ತಿಳಿದು ಬಂದಿದೆ ಎಂದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.