ಮನೆ ಅಪರಾಧ ಅನೈತಿಕ ಸಂಬಂಧ ಶಂಕೆ: ಪತ್ನಿಯ ಹತ್ಯೆ

ಅನೈತಿಕ ಸಂಬಂಧ ಶಂಕೆ: ಪತ್ನಿಯ ಹತ್ಯೆ

0

ಕೆ.ಆರ್.ಪೇಟೆ (K.R.Pete): ಅನೈತಿಕ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಪತ್ನಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ‌ ಪತಿ ಪೊಲೀಸರಿಗೆ ಶರಣಾಗಿದ್ದಾನೆ.‌
ರಾಣಿ(38) ಕೊಲೆಯಾದ ಮಹಿಳೆ. ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹೆತ್ತಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಶೋಕ್ ಎಂಬಾತ ತನ್ನ ಪತ್ನಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.‌
ಕೊಲೆಯಾದ ರಾಣಿ ಜಾಕಿ ಗಾರ್ಮೆಂಡ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದು, ಬೇರೆಯವರೊಂದಿಗೆ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಕಳೆದವಾರ ಪತಿಗೆ ತಿಳಿಸದೇ ಧರ್ಮಸ್ಥಳಕ್ಕೆ ಹೋಗಿಬಂದಿರುವ ಬಗ್ಗೆ ಗಂಡನಿಗೆ ಮಾಹಿತಿ ತಿಳಿದಿದೆ. ಸೋಮವಾರ ತಡರಾತ್ರಿ ಹನ್ನೆರಡು ಗಂಟೆವರೆಗೂ ಯಾರೊಂದಿಗೋ ತನ್ನ ಮೊಬೈಲ್ ನಲ್ಲಿ ಮಾತನಾಡಿ ನಂತರ ಮಲಗಿದ್ದಾಳೆ. ನಂತರ ಪತಿ ಅಶೋಕ್ ಮನೆಯ ಸಮೀಪದಲ್ಲಿದ್ದ ಕಲ್ಲುದಿಂಡನ್ನು ತಂದು ತಲೆಯ ಮೇಲೆ ಎತ್ತಿಹಾಕಿ ಸಾಯಿಸಿ ನಂತರ ಪಟ್ಟಣ ಠಾಣೆಗೆ ಬಂದು ಶರಣಾಗಿದ್ದಾನೆ.
ಘಟನೆ ಸಂಬಂಧ ಪಟ್ಟಣ ಠಾಣೆಯ ಪೊಲೀಸ್ ನಿರೀಕ್ಷಕ ದೀಪಕ್, ಪಿಎಸ್‌ಐ ಸುನಿಲ್ ಎಎಸ್‌ಐ ಶಿವಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ.

ಹಿಂದಿನ ಲೇಖನಅದ್ಧೂರಿ ದಸರಾ ಆಚರಣೆಗೆ ತೀರ್ಮಾನ: ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ
ಮುಂದಿನ ಲೇಖನಕೆ.ಆರ್.ಪೇಟೆ: 1500 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ