ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ: ಜ.27 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ 28 ರಂದು 28ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
ಕಾಲೇಜಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ್ ಈ ಕುರಿತು ಮಾತನಾಡಿ, ಇಲ್ಲಿನ ವಿದ್ಯಾನಗರದ ಕೆಎಲ್’ಇ ಸಂಸ್ಥೆಯ ಬಿ.ಬಿ. ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಹಾಗೂ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಜ. 27ರಿಂದ 29ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಹಿನ್ನೆಲೆ 27ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ 25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗವನ್ನು ಅಮಿತ್ ಶಾ ಅವರು ಉದ್ಘಾಟಿಸಲಿದ್ದಾರೆ. 28ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪಾಲ್ಗೊಳ್ಳಲಿದ್ದಾರೆ ಎಂದು ಎಂದು ಮಾಹಿತಿ ನೀಡಿದ್ದಾರೆ.
ಜ. 29ರಂದು ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹಾಗೂ ‘3 ಈಡಿಯಟ್ಸ್’ ಸಿನಿಮಾ ಖ್ಯಾತಿಯ ಎಂಜಿನಿಯರ್ ಸೋನಂ ವಾಂಗ್ಚುಕ್ ಭಾಗವಹಿಸಲಿದ್ದಾರೆ. ಅಮೃತ ಮಹೋತ್ಸವದ ಅಂಗವಾಗಿ ಮೂರು ದಿನ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.