ಮನೆ ರಾಜಕೀಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯಲ್ಲಿ ಪಾಲ್ಗೊಂಡ ಅಮಿತ್ ಶಾ

ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯಲ್ಲಿ ಪಾಲ್ಗೊಂಡ ಅಮಿತ್ ಶಾ

0

ಬೆಂಗಳೂರು: ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿರುವ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿ ಮತ್ತು ಗುರು ವಂದನಾ ಪ್ರಯುಕ್ತ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದಾರೆ.

ಸಚಿವ ಶಾ ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಭಾಗವಹಿಸಿದ್ದಾರೆ.ಅಮಿತ್‌ ಶಾ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ವಿಶ್ವವಿದ್ಯಾಲಯ ಹೆಲಿಪ್ಯಾಡ್ ಗೆ ಬಂದಿಳಿದರು. ಬಿ.ಎಚ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಅಮಿತ್ ಶಾ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.

ಶ್ರೀಗಳ ಭಕ್ತರು ರಾಜ್ಯದ ವಿವಿಧೆಡೆಗಳಿಂದ ಮಠಕ್ಕೆ ಆಗಮಿಸುತ್ತಿದ್ದಾರೆ.ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಿಂದಿನ ಲೇಖನತಂದೆಯಿಂದಲೇ ಮಗನ ಅಪಹರಣ:ದೂರು ದಾಖಲು
ಮುಂದಿನ ಲೇಖನಸಾಲದ ಹೊರೆ: ಮೊಬೈಲ್ ಶಾಪ್ ಮಾಲೀಕ ಆತ್ಮಹತ್ಯೆ