ಮನೆ Uncategorized ಸಿಎಂ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ

ಸಿಎಂ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ

0

ಬೆಂಗಳೂರು: ಪೊಲೀಸರಿಂದ ನನಗೆ ಅನ್ಯಾಯವಾಗಿದೆ ಎಂದು ಸಿಎಂ ಎದುರೇ ವಿಷ ಸೇವಿಸಿ ವೃದ್ಧ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಆರ್.ಟಿ ನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಸುಂಕದಕಟ್ಟೆ ನಿವಾಸಿ ವೃದ್ಧ ಚಂದ್ರಶೇಖರ್  ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಆರೋಪ ಮಾಡಿದ್ದು, ಸೈಟ್ ಮಾರಾಟದ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ವಿಷ ಸೇವನೆಗೆ ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ವೃದ್ಧ ಚಂದ್ರಶೇಖರ್ ಅವರನ್ನ ಪಕ್ಕಕ್ಕೆ ಕರೆದೊಯ್ದು ವಿಚಾರಿಸಿ ಮಾಹಿತಿ ಪಡೆದಿದ್ದಾರೆ. ಈ ಹಿಂದೆಯೂ ಸಿಎಂ ಎದರು ಚಂದ್ರಶೇಖರ್ ಅಳಲು ತೋಡಿಕೊಂಡಿದ್ದರು ಎನ್ನಲಾಗಿದೆ.

ಹಿಂದಿನ ಲೇಖನಅಂಧರ ತ್ರಿಕೋನ ಟ್ವೆಂಟಿ-20 ಫೈನಲ್: ಭಾರತ-ಪಾಕಿಸ್ತಾನ ಮುಖಾಮುಖಿ
ಮುಂದಿನ ಲೇಖನಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಇಬ್ಬರು ಸಾವು