ಮನೆ ರಾಜ್ಯ ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ: 40 ಕೋಟಿ ಪತ್ತೆ

ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ: 40 ಕೋಟಿ ಪತ್ತೆ

0

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಹಣ ಪತ್ತೆ ಮಾಡಿದ್ದಾರೆ. ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್​ಮೆಂಟ್​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ 40 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ನಿನ್ನೆ ಬೆಳಗ್ಗೆ ಬಿಲ್ಡರ್ ಸಂತೋಷ್​ ನಿವಾಸದ ಮೇಲೆ ಐಟಿ ತಂಡ ದಾಳಿ ನಡೆಸಿತ್ತು.

ಬೆಳಗ್ಗೆ 6ರಿಂದ ಇಡೀ ದಿನ ಅಪಾರ್ಟ್​ಮೆಂಟ್​ನ 5ನೇ ಮಹಡಿಯ ಫ್ಲ್ಯಾಟ್​ನಲ್ಲಿ ದಾಖಲೆ ಪರಿಶೀಲನೆ ನಡೆಸಿತ್ತು. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಆ ಹಣ ಮಾಜಿ ಎಂಎಲ್​ಸಿಗೆ ಸೇರಿದ್ದು ಎನ್ನಲಾಗಿದೆ.

ಬಿಲ್ಡರ್ ಸಂತೋಷ್ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದಾಗ ಸಂತೋಷ್ ಮಾಜಿ MLC ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಪತ್ತೆಯಾದ ಹಣದ ಮೂಲ ಕಂಡು ಹಿಡಿಯಲು ಮಾಜಿ ಎಂಎಲ್​ಸಿ ಸಹೋದರರನ್ನು ಫ್ಲ್ಯಾಟ್​ಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ ಹೆಚ್ಚು ಕಾರುಗಳಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

3ಟ್ರಂಕ್, 3ಬ್ಯಾಗ್, 1ಸೂಟ್ಕೇಸ್​ನ​ಷ್ಟು ವಸ್ತು​ ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳನ್ನು 2 ಕಾರುಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಸತತ 18 ಗಂಟೆಗಳ ಕಾಲ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಕೊನೆಗೆ ವಿಚಾರಣೆ ಮುಗಿಸಿ ಸಂತೋಷ್​ಗೆ ನೋಟಿಸ್ ನೀಡಿ ಐಟಿ ತಂಡ ತೆರಳಿದೆ. ಪತ್ತೆಯಾದ ಹಣದ ಬಗ್ಗೆ ಮತ್ತಷ್ಟು ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿದೆ.

ಇನ್ನು ಬಿಲ್ಡರ್​ ಸಂತೋಷ್​ ವಿಚಾರಣೆ ವೇಳೆ ಕಾಂಗ್ರೆಸ್ ಮುಖಂಡ ಬೆಮೆಲ್ ಕಾಂತರಾಜು ಅವರ ಹೆಸರು ಕೇಳಿ ಬಂದಿದ್ದು ಈ ಬಗ್ಗೆ ಕಾಂತರಾಜು ಪ್ರತಿಕ್ರಿಯೆ ನೀಡಿದ್ದಾರೆ. ಬಿಲ್ಡರ್​ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ. ಸಂತೋಷ್ ಮನೆಯಲ್ಲಿ ಪತ್ತೆಯಾದ ಹಣಕ್ಕೂ ನನಗೂ ಸಂಬಂಧವಿಲ್ಲ. ಕೇತಮಾರನಹಳ್ಳಿ ಅಪಾರ್ಟ್​ಮೆಂಟ್ ಮೇಲೆ ಐಟಿ ದಾಳಿ ಬಗ್ಗೆ ಗೊತ್ತಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ಯಾಕೆ ತಳುಕು ಹಾಕ್ತಿದ್ದಾರೋ ಗೊತ್ತಿಲ್ಲ. ಬಿಲ್ಡರ್​ ಸಂತೋಷ್​ರನ್ನು ನಾನು ನೋಡೇ ಇಲ್ಲ ಎಂದ ಕಾಂತರಾಜು ಟಿವಿ9ಗೆ ತಿಳಿಸಿದ್ದಾರೆ.

ಹಿಂದಿನ ಲೇಖನರಾಮನಗರದಲ್ಲಿ ರೌಡಿ ಶೀಟರ್ ಲೋಕೇಶ್ ನ ಬರ್ಬರ ಹತ್ಯೆ
ಮುಂದಿನ ಲೇಖನಆಪರೇಷನ್ ಅಜಯ್ ಕಾರ್ಯಾಚರಣೆಯ ಭಾಗವಾಗಿ ಇಸ್ರೇಲ್ನಿಂದ 274 ಭಾರತೀಯರನ್ನು ಹೊತ್ತು ಸ್ವದೇಶದತ್ತ ಬರುತ್ತಿರುವ ನಾಲ್ಕನೇ ವಿಮಾನ