ಬೆಂಗಳೂರು: ಕಾಂಗ್ರೆಸ್ ನವರ ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಹೋಟೆಲ್ ಕ್ಯಾಪಿಟಲ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಅವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಅವರು ಹಿಂದೆ ಮಾಡಿರುವ ಕರ್ಮಕಾಂಡವನ್ನು ನೆನಪು ಮಾಡಿಕೊಂಡು ಮಾತನಾಡುತ್ತಾರೆ. ಯಾವ ಗುತ್ತಿಗೆದಾರರನ್ನು ನೀಡಬೇಡಿ. ಮುಂದೆ ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಏನೆಂದರೆ ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡಲು ಬರುತ್ತಿದ್ದಾರೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ಅವರ ಅವರ ಅಜೆಂಡಾ ಅವರೇ ಹೇಳಿಕೊಂಡಿದ್ದಾರೆ. ಶೇ 40 % ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ. ನ್ಯಾಯಾಲಯದಲ್ಲಿ ಕೊಡುವುದಾಗಿ ಹೇಳಿದ್ದು ಇನ್ನೂ ಕೊಟ್ಟಿಲ್ಲ. ಅವರು ಎಲ್ಲಿ ಬೇಕಾದರೂ ನಿರ್ದಿಷ್ಟ ಪ್ರಕರಣ ದಾಖಲು ಮಾಡಿದರೆ ತನಿಖೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನವಿಲ್ಲ ಎಂದರು.
ಗುಳಿಹಟ್ಟಿ ಶೇಖರ್ ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರ ಮುಖೇನ ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ, ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವಾಗಿದೆ. ಇದ್ಯಾವುದೂ ನೀಡದೆ, ಕೇವಲ ಹೇಳಿಕೆ ನೀಡಿದರೆ ಆಗುವುದಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ 5 ವರ್ಷ ಆಡಳಿತ ಮಾಡಿದೆ. ಅವರೂ ಟೆಂಡರ್ ಕರೆದಿದ್ದಾರೆ. ನಾವು ಬಂದ ನಂತರ ಟೆಂಡರ್ ಪರಿಶೀಲನಾ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ ದೂರು ನೀಡಬಹುದಾಗಿದೆ.
ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದವರು ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.