ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ (Karnataka Legislative Council Recruitment Drive 2024) ನೋಟಿಫಿಕೇಶನ್ ಬಿಡುಗಡೆಯಾಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ ಭರ್ತಿ ಆಗಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 05, 2024. ಕರ್ನಾಟಕ ವಿಧಾನ ಪರಿಷತ್ತಿನ ಅಧಿಕೃತ ವೆಬ್ಸೈಟ್ ವಿಳಾಸ https://www.kla.kar.nic.in/council/career.htm
ಹುದ್ದೆಗಳ ವಿವರ ವಾಹನ ಚಾಲಕರು : 03 ಗ್ರೂಪ್ ಡಿ ಹುದ್ದೆಗಳು (ದಲಾಯತ್ / ಕಾವಲುಗಾರರು / ಸ್ವೀಪರ್ ಕಮ್ ಸ್ಕ್ಯಾವೆಂಜರ್ / ಸೆಕ್ಯೂರಿಟಿ ಗಾರ್ಡ್) : 29
ವೇತನ ಶ್ರೇಣಿ ವಿವರ ವಾಹನ ಚಾಲಕರು : 21,400-42,000. ಗ್ರೂಪ್ ಡಿ ಹುದ್ದೆಗಳು (ದಲಾಯತ್ / ಕಾವಲುಗಾರರು / ಸ್ವೀಪರ್ ಕಮ್ ಸ್ಕ್ಯಾವೆಂಜರ್ / ಸೆಕ್ಯೂರಿಟಿ ಗಾರ್ಡ್) : Rs.17,000-28950.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-04-2024
ಅರ್ಜಿ ಸಲ್ಲಿಸಬೇಕಾದ ವಿಳಾಸ ಅರ್ಜಿಗಳನ್ನು ಸಚಿವಾಲಯದ ವೆಬ್ ಸೈಟ್ ನಲ್ಲಿ (https://kla.kar.nic.in/council/notification04032024.PDF) ನೀಡಿದ್ದು ನಮೂನೆ-1 ರ ದ್ವಿಪ್ರತಿಯಲ್ಲಿ ಅಗತ್ಯವುಳ್ಳ ದಾಖಲೆಗಳನ್ನು ಲಗತ್ತಿಸಿ, ಕೊನೆಯ ದಿನಾಂಕ 05-04-2024 ರಂದು ಸಂಜೆ 05-00 ಗಂಟೆಯೊಳಗಾಗಿ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ – 5079, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560 001 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆಯ ಮೂಲಕ ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 216 ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ತಲುಪಿಸತಕ್ಕದ್ದು.
ಅರ್ಜಿ ಶುಲ್ಕ ವಿವರ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50. ಎಸ್ಸಿ / ಎಸ್ಟಿ / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿಯಿದೆ.
ಅರ್ಹತೆಗಳು ವಾಹನ ಚಾಲಕರು ಹುದ್ದೆಗೆ – ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್. ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಮೋಟಾರು ಕಾರುಗಳ ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು. ಗ್ರೂಪ್ ಡಿ ಹುದ್ದೆಗಳಿಗೆ – ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿಬೇಕು.
ಕರ್ನಾಟಕ ವಿಧಾನ ಪರಿಷತ್ತಿನ ವೆಬ್ ಸೈಟ್ ವಿಳಾಸ https://kla.kar.nic.in/council/notification04032024.PDF
ವಯಸ್ಸಿನ ಅರ್ಹತೆಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ ಮೀರಿರಬಾರದು, ಇತರೆ ಹಿಂದುಳಿದ ವರ್ಗದವರಿಗೆ ಗರಿಷ್ಠ 38 ವರ್ಷ ಮೀರಿರಬಾರದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.