ಮನೆ ಶಿಕ್ಷಣ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

0

ಮಂಡ್ಯ: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಚೇತನ ಮಕ್ಕಳ ಶಿಕ್ಷಣದ ಮಧ್ಯವರ್ತನೆಗಳನ್ನು ಅನುಷ್ಠಾನಗೊಳಿಸಲು 2025-26ನೇ ಸಾಲಿನಲ್ಲಿ ಜಿಲ್ಲೆಯ 08 ಬ್ಲಾಕ್‌ನ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿ ಇರುವ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ (ಪ್ರಾಥಮಿಕ-04 ಹಾಗೂ ಪ್ರೌಢ-15) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ 2026 ರ ಮೇ 31 ವರೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಬಳಿ ಪಡೆದು ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿಗೆ (ಡಿ.ಡಿ.ಪಿ.ಐ ಕಛೇರಿಯ ಮೇಲಿನ ಅಂತಸ್ತು) ಜೂನ್ 16 ರಿಂದ 26 ರೊಳಗೆ ಸಲ್ಲಿಸಬಹುದಾಗಿದೆ. ಎಂದು ಸಮಗ್ರ ಶಿಕ್ಷಣ ಕರ್ನಾಟಕ ಶಾ.ಶಿ.ಇಲಾಖೆಯ ಪದನಿಮಿತ್ತ ಜಿಲ್ಲಾ ಯೋಜನಾಸಮನ್ವಯಾಧಿಕಾರಿಗಳು ಹಾಗೂ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.