ಮನೆ ದೇವಸ್ಥಾನ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನದ ವ್ಯವಸ್ಥೆ

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನದ ವ್ಯವಸ್ಥೆ

ಬಹುದಿನಗಳ ಬೇಡಿಕೆ ಈಡೇರಿಸಿದ ಮುಜರಾಯಿ ಸಚಿವ ರಾಮಲಿಂಗರೆಡ್ಡಿ

0

ಬೆಂಗಳೂರು- ತಿರುಪತಿ- ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರಣಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ಏಕೆಂದರೆ, ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಅವರು, ಹಿರಿಯ ನಾಗರಿಕರ ಬಹುದಿನಗಳ ಮನವಿಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಜಾರಿಗೆ ತಂದಿದ್ದಾರೆ.

Join Our Whatsapp Group

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ ಶ್ರೇಣಿಯ ದೇವಾಲಯಗಳಲ್ಲಿ, 65 ವರ್ಷ ಮೇಲ್ಪಟ್ಟ ಇರುವ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ವಯಸ್ಸಿನ ಅಧಾರದ ಮೇಲೆ ಸರತಿಯ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದಕ್ಕಾಗಿ ಹಿರಿಯ ನಾಗರೀಕರಿಗಾಗಿ ವಿಶೇಷ ಕ್ಯೂ ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ, ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿರುವುದರಿಂದ 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು.
ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ, ಅವರಿಗೆ ನೀವು ದರ್ಶನಕ್ಕೆ ಅನಕೂಲವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಲು ಸೂಚಿಸಲಾಗಿದ್ದು, ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರೀಕರಿಗೆಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಸೂಚಿಸಲಾಗಿದೆ.
ದೇವಾಲಯಗಳಲ್ಲಿ, ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು (Help desk) ಸ್ಥಾಪಿಸುವುದು, ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜನೆ ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಆನ್‌ ಲೈನ್‌ ಬುಕಿಂಗ್‌ನಲ್ಲೂ ರಿಯಾಯಿತಿ:

ದೇವಸ್ಥಾನಗಳಲ್ಲಿ ವಯಸ್ಸಾದವರು ಸಾಮಾನ್ಯ ಕ್ಯೂನಲ್ಲಿ ನಿಂತು ಹೋಗಲು ಸಾಧ್ಯವಿಲ್ಲ. ಸಹಜವಾಗಿ ಕೆಲವರಿಗೆ 65 ವರ್ಷ ಆದ ನಂತರ ತುಂಬಾ ಹೊತ್ತು ನಿಲ್ಲಲು ಸಾಧ್ಯವಾಗುವುದಿಲ್ಲ. ಅಂತಹವರಿಗೆ ಪ್ರತ್ಯೇಕ ಸರತಿಯ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ನಿದೇರ್ಶನ ನೀಡಿದ್ದಾರೆ.
ಆನ್ ಲೈನ್ ಬುಕ್ಕಿಂಗ್‌ನಲ್ಲೂ ವಿಶೇಷವಾಗಿ ಹಿರಿಯರಿಗೆ ವಸತಿಗಳನ್ನು ಕೊಡಲು ಸೂಚಿಸಿರುವ ಸಚಿವ ರೆಡ್ಡಿ ಅವರು.,ಎಲ್ಲ ದೇವಸ್ಥಾನಗಳು ಸ್ವಚ್ಚವಾಗಿರಬೇಕು. ದೇವಸ್ಥಾನಗಳಲ್ಲಿ ಕುಡಿಯುವ ನೀರು ಶೌಚಾಲಯ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ್ದಾರೆ.
ಪತ್ರ ಬರೆದಿದ್ದ ಅರ್ಚಕರ ಒಕ್ಕೂಟ: ರಾಜ್ಯದಲ್ಲಿ ಹಿರಿಯ ನಾಗರೀಕರ ಪರನಿಂತ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟವು ಕರ್ನಾಟಕ ಸರ್ಕಾರದ ಹಿಂದೂ ದೇವಾಲಯಗಳಲ್ಲಿ ಹಿರಿಯನಾಗರಿಕರಿಗೆ ನೇರ ದರ್ಶನಕ್ಕೆ ಮನವಿ ಸಲ್ಲಿಕೆ ಮಾಡಲಾಗುತ್ತು. 65 ವರ್ಷ ಮೇಲ್ಪಟ್ಟವರಿಗೆ ದೇವಾಲಯಗಳಲ್ಲಿ ನೇರ ಸಂದರ್ಶನಕ್ಕೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಅರ್ಚಕರ ಒಕ್ಕೂಟದಿಂದ ಮುಜುರಾಯಿ ಇಲಾಖೆಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಮುಖರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿಗೆ ಪತ್ರ ಬರೆದು ನೇರವಾಗು ಅರ್ಚಕರ ಒಕ್ಕೂಟದಿಂದ ಅವರಿಗೆ ಮನವಿ ಮಾಡಲಾಗಿತ್ತು. ಆದ್ದರಿಂದ, ರಾಜ್ಯದ ಎ‌ ಮತ್ತು ಬಿ ವರ್ಗದ ಸಂಸ್ಥೆಗಳಲ್ಲಿ ಹಿರಿಯನಾಗರೀಕರಿಗೆ ಕ್ಯೂ ಇಲ್ಲದೇ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಹಿಂದಿನ ಲೇಖನವರುಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ವಿಶೇಷ ವ್ಯವಸ್ಥೆ ಕಲ್ಪಿಸಿದ ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನನವೀಕರಿಸಬಹುದಾದ ಇಂಧನ ವಲಯದಲ್ಲಿ ಖಾಸಗಿ ಹೂಡಿಕೆ ಆಕರ್ಷಣೆಗೂ ಒತ್ತು: ಇಂಧನ ಸಚಿವ ಜಾರ್ಜ್