ಹುಬ್ಬಳ್ಳಿ: ಕೇವಲ 5 ರೂಪಾಯಿ ಕೇಳಿದ್ದಕ್ಕೆ ಬಾಲಕನನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ರವಿ ವೆಂಕಟೇಶ ಬಳ್ಳಾರಿ ಬಂಧಿತ ಆರೋಪಿ.
ಪ್ರಕರಣದ ಕುರಿತು ಮಾಹಿತಿ ನೀಡಿದ ಡಿಸಿಪಿ ರಾಜೀವ.ಎಂ, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕನ ಕೊಲೆ ಪ್ರಕರಣದ ತನಿಖೆ ನಡೆಸಿದ್ದು, ಆರೋಪಿ ರವಿಯನ್ನು ವಶಕ್ಕೆ ಪಡೆದಿದ್ದೇವೆ. ಆ ಬಾಲಕ ಆರೋಪಿಗೆ ಮಾಮಾ, ಮಾಮಾ ಎಂದುಕೊಂಡಿದ್ದ ಅಂತಹ ಬಾಲಕನನ್ನೇ ಆರೋಪಿ ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
ಬಾಲಕನ ಶವ ಪತ್ತೆಯಾಗಿರುವ ಬೆನ್ನಲ್ಲೇ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಬಾಲಕನ ಮರಣೋತ್ತರ ಪರೀಕ್ಷೆ ಜೊತೆಗೆ ಎಲ್ಲ ರೀತಿಯಲ್ಲಿ ತನಿಖೆ ನಡೆಸಿದ್ದೇವೆ ಎಂದರು.
ಕುಡಿದ ಮತ್ತಿನಲ್ಲಿರುವಾಗಲೇ ಬಾಲಕನ ಕೆನ್ನೆಗೆ ಹೊಡೆದಿದ್ದಾನೆ. ಆಗ ಬಾಲಕ ಪ್ರಜ್ಞೆ ತಪ್ಪಿದ್ದು, ಆಗ ಗಾಬರಿಗೊಂಡ ಆರೋಪಿ ರವಿ ಬಳ್ಳಾರಿ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಅಲ್ಲದೇ ಬೆರಳಚ್ಚು ಸಾಕ್ಷಿ ಪೊಲೀಸರಿಗೆ ಲಭ್ಯವಾಗಬಾರದು ಎಂಬ ಕಾರಣಕ್ಕೆ ಆರೋಪಿ ರವಿ ಬಳ್ಳಾರಿ ಬಾಲಕನ ಬಟ್ಟೆ ಬಿಚ್ಚಲು ಮುಂದಾಗಿದ್ದಾನೆ ಎಂಬುವಂತ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ ಎಂದು ಹೇಳಿದರು.
ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ. ಅಲ್ಲದೇ ಎಲ್ಲ ರೀತಿಯ ದಾಖಲೆಗಳು ಹಾಗೂ ಮೆಡಿಕಲ್ ಡಾಕ್ಯುಮೆಂಟ್ ಕೂಡ ಲಭ್ಯವಾಗಿದೆ ಎಂದು ಅವರು ಹೇಳಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.