ಮನೆ ಅಪರಾಧ ನಾಡಬಾಂಬ್​​ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನ ಬಂಧನ

ನಾಡಬಾಂಬ್​​ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನ ಬಂಧನ

0

ದಾವಣಗೆರೆ: ನಾಡಬಾಂಬ್​​ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ನಿವಾಸಿ ಬಸವರಾಜಪ್ಪ (42) ಬಂಧಿತ ಆರೋಪಿ. ಅಪ್ಪು (38) ಪರಾರಿಯಾಗಿದ್ದಾನೆ.

ಆರೋಪಿ ಬಳಿ ಇದ್ದ 63 ಜೀವಂತ ನಾಡಬಾಂಬ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನ್ಯಾಮತಿ ಶಾಖೆಯ ಹರಮಘಟ್ಟ ಅರಣ್ಯ ಪ್ರದೇಶದಲ್ಲಿ ನಾಡಬಾಂಬ್​​ ಗಳನ್ನು ಕೋಳಿ ಹಾಗೂ ಕುರಿ ಮಾಂಸದಲ್ಲಿ‌ಟ್ಟು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದರು.  ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಸದ್ಯ ಪೊಲೀಸರು ಆರೋಪಿ ಬಸವರಾಜಪ್ಪನನ್ನು ಜೆಎಂಎಫ್ ​ಸಿ ಕೋರ್ಟ್ ​ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ವಶಪಡಿಸಿಕೊಂಡ ಜೀವಂತ ನಾಡ ಬಾಂಬ್​ ಗಳನ್ನು ನಿಷ್ಕ್ರಿಯ ಗೊಳಿಸಲು ಚಿತ್ರದುರ್ಗ ಜಿಲ್ಲೆಯ ಡಿಎಸ್ ಹಳ್ಳಿ ಸ್ಪೋಟಕ ವಸ್ತು ಸಂಗ್ರಹಾಲಯಕ್ಕೆ ರವಾನೆ ಮಾಡಲಾಗಿದೆ.

ಹಿಂದಿನ ಲೇಖನಉಡುಪಿ: ನಮಾಜ್‌ ಮಾಡುತ್ತಾ ಕುಳಿತಲ್ಲೇ ಕುಸಿದು ವ್ಯಕ್ತಿ ಸಾವು
ಮುಂದಿನ ಲೇಖನಖಾಸಗಿ ಬಸ್‌ ಗೆ ಲಾರಿ ಡಿಕ್ಕಿ:  ಮಂದಿ ಸಾವು, 15 ಮಂದಿಗೆ ಗಂಭೀರ ಗಾಯ