ಮುಂಬೈ(Mumbai): ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಡೆಸುತ್ತಿರುವ ‘ಡಿ’ ಕಂಪನಿ ಜೊತೆ ಸಂಪರ್ಕ ಹೊಂದಿದ್ದ ಐವರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಅಜಯ್ ಗಂಡ, ಫಿರೋಜ್ ಚಮ್ಡ, ಸಮೀರ್ ಖಾನ್, ಪಾಪ ಪಠಾನ್ ಮತ್ತು ರಮ್ಜಾಜ್ ರೆಡ್ಕರ್ ಬಂಧಿತರು.
ಇತ್ತೀಚೆಗೆ ದಾವೂದ್ ಆಪ್ತ ಸಹಾಯಕ ಛೋಟಾ ಶಕೀಲ್ನ ಸಹೋದರ ಸಂಬಂಧಿ ಸಲೀಂ ಕುರೇಶಿ ಅಲಿಯಾಸ್ ಸಲೀಂ ಫ್ರೂಟ್ ಮತ್ತು ಉದ್ಯಮಿ ರಿಯಾಜ್ ಭಾಟಿ ಅವರನ್ನು ಸುಲಿಗೆ ನಿಗ್ರಹ ದಳ (ಎಇಸಿ) ಬಂಧಿಸಿತ್ತು.
ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆ ವೇಳೆ ಇನ್ನೂ ಐವರು ಕೃತ್ಯದಲ್ಲಿ ಪಾಲ್ಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆನಂತರ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಬೈನ ವರ್ಸೊವಾ ಪೊಲೀಸ್ ಠಾಣೆಯಲ್ಲಿ ರಿಯಾಜ್ ಭಾಟಿ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿತ್ತು. ಈತನಿಗೆ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕವಿತ್ತು. ಉದ್ಯಮಿಯೊಬ್ಬರಿಗೆ ಬೆದರಿಕೆ ಒಡ್ಡಿದ್ದ ಆರೋಪಿಗಳು ₹ 30 ಲಕ್ಷ ಬೆಲೆಯ ಕಾರು ಮತ್ತು ₹ 7.5 ಲಕ್ಷ ನಗದು ಬೇಡಿಕೆ ಇಟ್ಟಿದ್ದರು.
ಈ ಪ್ರಕರಣದಲ್ಲಿ ಛೋಟಾ ಶಕೀಲ್ ಸಂಬಂಧಿ ಸಲೀಮ್ ಫ್ರುಟ್ ಹೆಸರನ್ನು ಎಫ್ಐಆರ್ನಲ್ಲಿ ದಾಖಲಿಸಲಾಗಿತ್ತು.
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.