ಮೈಸೂರು(Mysuru): ಅಪಾರ್ಟ್ಮೆಂಟ್ವೊಂದರಲ್ಲಿ ಕುಳಿತು ನಗರದ ಪ್ರತಿಷ್ಠಿತ ಬಡಾವಣೆಗಳ ಸೈಟ್ ಮತ್ತು ಜಮೀನುಗಳ ನಕಲಿ ದಾಖಲೆ ಸೃಷ್ಟಿಸಿ ಮೋಸದಿಂದ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪ್ರವೀಣ್ ಗುಂಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಖದೀಮರನ್ನು ಬಂಧಿಸಿದೆ.
ಬೆಂಗಳೂರಿನ ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮೂಲತಃ ಮೈಸೂರಿನವರಾಗಿದ್ದಾರೆ. ಅವರ ತಂದೆ ನಗರದ ಪ್ರತಿಷ್ಠಿತ ಬಡಾವಣೆಯೊಂದರಲ್ಲಿ ಸೈಟ್ ಹೊಂದಿದ್ದಾರೆ. ಆ ಸೈಟ್ಗೆ ವಂಚಕರು ನಕಲಿ ದಾಖಲೆ ಹಾಗೂ ಮಾಲೀಕರನ್ನು ಸೃಷ್ಟಿಸಿ ಮಾರಾಟ ಮಾಡಿದ್ದರು.
ಶಾಸಕರ ತಂದೆ ತಮ್ಮ ನಿವೇಶನಕ್ಕೆ ಸಂಬಂಧಿಸಿದಂತೆ ದಾಖಲೆ ಪಡೆಯಲು ಬಂದಾಗ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬಗ್ಗೆ ಮೆಟಗಳ್ಳಿ ಪೊಲೀಸ್ ಠಾಣೆಗೂ ಅವರು ದೂರು ನೀಡಿದ್ದರು.
ಬಂಧಿತ ಆರೋಪಿಗಳಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಲು ಬಳಸುತ್ತಿದ್ದ ಲ್ಯಾಪ್ಟ್ಯಾಪ್, ಪ್ರಿಂಟರ್, ಸ್ಕ್ಯಾನರ್, ಮೊಬೈಲ್ ಹಾಗೂ ವಿವಿಧ ಬ್ಯಾಂಕ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ನಕಲಿ ಸೀಲ್ಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ಹಿನ್ನೆಲೆಯಲ್ಲಿ ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ.
ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.