ಕಲಬುರಗಿ: ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಮೂರು ತಂಡಗಳು ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯ ವಿಭಾಗೀಯ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ 195 ತಾಲೂಕುಗಳನ್ನು ಬರಗಾಲ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನೆಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ಕಳುಹಿಸಿದೆ. ಇದೇ ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ತಿಳಿಸಿದರು.
ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿ ಇದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು, ಈಗಾಗಲೇ ಶೇ. 80 ರಿಂದ 90 ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತೀಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ನಲ್ಲಿ ಸುಮಾರು 28 ಸಾವಿರ ಕೋ.ರೂ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ವಿವರಣೆ ನೀಡಿದರು.
ಕೃಷಿ ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಸೂಚಿಸಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆ ಮತ್ತೆ ಜಾರಿಗೆ ತರಲಾಗಿದೆ. ರೈತರ ಮಕ್ಕಳಿಗೆ ನೀಡಲಾಗುವ ವಿದ್ಯಾನಿಧಿ ಮುಂದುವರೆಸಲಾಗಿದೆ. ಆದರೆ ಪ್ರಧಾನಮಂತ್ರಿ ಕಿಸಾನ ಸಮ್ಮಾನ ನಿಧಿ ಜತೆಗೆ ರಾಜ್ಯದಿಂದ ನೀಡಲಾಗುತ್ತಿದ್ದ 4000 ರೂ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದರು.
ಶಾಸಕರಾದ ಬಿ.ಆರ್. ಪಾಟೀಲ್, ಎಂ.ವೈ ಪಾಟೀಲ್, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರು ಉಪಸ್ಥಿತರಿದ್ದರು.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
SSLC- PUC ಪಾಸಾದವರಿಗೆ ಉದ್ಯೋಗವಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.