ಮನೆ ಸ್ಥಳೀಯ ಚುನಾವಣೆಯು ಸಮೀಪಿಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು:  ಡಾ. ಕೆ ವಿ ರಾಜೇಂದ್ರ

ಚುನಾವಣೆಯು ಸಮೀಪಿಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು:  ಡಾ. ಕೆ ವಿ ರಾಜೇಂದ್ರ

0

ಮೈಸೂರು: ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಪ್ರತಿಯೊಬ್ಬ ಅಧಿಕಾರಿಯು ಬಹಳ ಶ್ರದ್ದೆಯಿಂದ ಕಾರ್ಯನಿರ್ವಾಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಎ ಇ ಒ, ವಿ ವಿ ಟಿ, ಎ ಟಿ, ಇ ಟಿ, ಐ ಟಿ, ಎಂ ಸಿ ಎಂ ಸಿ ತಂಡಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯು ಮಾರ್ಚ್ ತಿಂಗಳಲ್ಲಿ  ಸಾಧ್ಯತೆಗಳಿದ್ದು, ಅದಕ್ಕೆ ಕಟ್ಟು ನಿಟ್ಟಿನ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಅಧಿಕಾರಿಗಳನ್ನು ತಂಡಗಳಾನ್ನಾಗಿ ರೂಪಿಸಿ, ಕೆಲಸದ ಪಟ್ಟಿಯನ್ನು ನೀಡಲಾಗುತ್ತದೆ ಅದರನ್ವಯ ಕಾರ್ಯನಿರ್ವಾಹಿಸಬೇಕು ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯು ಕಳೆದ ಚುನಾವನೆಗಳಿಗಿಂತ ವಿಭಿನ್ನವಾಗಿರಲಿದ್ದು ಶೇ.100 ರಷ್ಟು ನಮ್ಮ ಪ್ರಯತ್ನದಿಂದ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಎಚ್ಚರಿಕೆಯಿಂದ ಯಶಸ್ವಿಯಾಗಿ ಮಾಡಬೇಕು. ಮಾದರಿ ನೀತಿ ಸಂಹಿತೆಯು ಚುನಾವಣೆ ಪ್ರಾರಂಭವಾಗಿ ಅದರ ಫಲಿತಾಂಶ ಪ್ರಕಟವಾಗುವವರೆಗೂ ಜಾರಿಯಲ್ಲಿರುವುದರಿಂದ ಈ ಸಮಯದಲ್ಲಿ  ಅಧಿಕಾರಿಗಳು

ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಬೇಕು. ಕಳೆದಬಾರಿ ಇದ್ದ ಸ್ಥಳದಲ್ಲೇ ಚೆಕ್ ಪೋಸ್ಟ್ ನಿರ್ಮಿಸುವ ಬದಲು ಸೂಕ್ತ ಸ್ಥಳವನ್ನು ಆರಿಸಬೇಕು ಎಂದು ಸಲಹೆ ನೀಡಿದರು.

ಚುನಾವಣೆಯ ಅವಧಿಯಲ್ಲಿ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭಗಳು ಏರ್ಪಡದಂತೆ ನೋಡಿಕೊಳಲ್ಲಬೇಕು. ಅನಿವಾರ್ಯತೆ ಎಂಬ ಕಾರ್ಯಕ್ರಮಗಳಿಗೆ ಪೊಲೀಸ್ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿರಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಇರುವ ಅನವಶ್ಯಕ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ಬ್ಯಾನರ್ ಮತ್ತು ಪೋಸ್ಟರ್ ಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಜಾಹೀರಾತು, ಸರಕಾರಿ ಮತ್ತು ಅನುಧಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ, ಚುನಾವಣ ಸಭೆಗಳ ಸಂಬಂಧಿಸಿದ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಪಕ್ಕದ ಕ್ಷೇತ್ರದ ಚುನಾವಣಾ ಅಧಿಕಾರಿಗಳೊಡನೆ ಸೌಹಾರ್ದತೆಯಿಂದ ನಡೆದುಕೊಂಡು, ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಇದರಿಂದ ಸಾರ್ವಜನಿಕರಿಗೂ ಯಾವುದೇ ತೊಂದರೆಯಾಗಬಾರದು ಎಂದರು.

ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಪ್ರತಿ ನಿಮಿಷವೂ ಶ್ರದ್ದೆಯಿಂದ ಕಾರ್ಯನಿರ್ವಾಹಿಸಬೇಕು. ಸಣ್ಣ ನೆಪ ಹೇಳಿ ಗೈರಾಗುವುದು, ಕೆಲಸದ ಸಮಯದಲ್ಲಿ ಕಾಲ ಹರಣ ಮಾಡುವುದು ಕಂಡುಬಂದಲ್ಲಿ  ಅಂತಹವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ವಿ.ಶಿವರಾಜು ಸೇರಿದಂತೆ ಮತ್ತಿತರರು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದಿನ ಲೇಖನಸರ್ವಜ್ಞನ ವಚನಗಳು ಸರ್ವರಿಗೂ ಸರ್ವ ಕಾಲಕ್ಕೂ ಅನ್ವಯಿಸುವಂತದ್ದು: ಕೆ.ಎಂ. ಗಾಯತ್ರಿ
ಮುಂದಿನ ಲೇಖನನನ್ನ ತೆರಿಗೆ ನನ್ನ ಹಕ್ಕು ಎನ್ನುವ ಬದಲು ನನ್ನ ತೆರಿಗೆ ಕಾಂಗ್ರೆಸ್ ​ಗೆ ಅಂತ ಬದಲಿಸಿಕೊಳ್ಳಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ