ಬೆಂಗಳೂರು: ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆ ವೇಳೆಗೆ ಶ್ರೀರಾಮಪುರದ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರದಲ್ಲಿ ಈಡಿಗರ ಸಂಪ್ರದಾಯದ ಪ್ರಕಾರ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಸ್ಪಂದನಾ ಅವರ ಅಂತಿಮಯಾತ್ರೆ ನಡೆಯಲಿದೆ.
ಇನ್ನು ಹಲವು ಗಣ್ಯಾತೀಗಣ್ಯರು ಆಗಮಿಸಿ ಸ್ಪಂದನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಪುನೀತ್ ರಾಜ್ಕುಮಾರ್ ಕೂಡ ಹೃದಯಾಘಾತದಿಂದ ಮೃತಪಟ್ಟರು. ಕಣ್ಣೆದುರೇ ಅವರನ್ನು ಅಶ್ವಿನಿ ಕಳೆದುಕೊಂಡರು. ಅಶ್ವಿನಿ ಅವರಿಗೆ ಆ ನೋವು ಇನ್ನೂ ಕಡಿಮೆ ಆಗಿಲ್ಲ. ಸ್ಪಂದನಾ ಸಾವು ಮತ್ತಷ್ಟು ನೋವು ಕೊಟ್ಟಿದೆ. ಈ ಕಾರಣಕ್ಕೆ ಅಶ್ವಿನಿ ಕಣ್ಣೀರು ಹಾಕಿದ್ದಾರೆ.
ಅಶ್ವಿನಿ ಪುನೀತ್ ರಾಜ್ ಕುಮಾರ್, ಮಗಳು ಕೂಡ ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಬಂದಿದ್ದು, ಅವರು ಕೂಡ ಕಣ್ಣೀರು ಹಾಕಿದ್ದಾರೆ. ಅಂತಿಮ ದರ್ಶನಕ್ಕೆ ಬಂದ ಅನೇಕರು ವಿಜಯ್ ರಾಘವೇಂದ್ರ ಅವರನ್ನು ಸಮಾಧಾನ ಮಾಡಿದ್ದಾರೆ.
ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರ ಚಿನ್ನೇ ಗೌಡ ಅವರ ಮಕ್ಕಳು ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ. ಹೀಗಾಗಿ ರಾಜ್ ಕುಟುಂಬದ ಜೊತೆಗೆ ಇವರಿಗೆ ನಂಟಿದೆ. ಸ್ಪಂದನಾ ಕೂಡ ರಾಜ್ ಫ್ಯಾಮಿಲಿ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದರು.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.