ಮೈಸೂರು(Mysuru): ಎಲ್ಲದಕ್ಕೂ ಸಾಕ್ಷಿ ಕೇಳುತ್ತೀರಿ. ಮೊದಲು ನಿಮ್ಮ ಆತ್ಮಸಾಕ್ಷಿ ಕೇಳಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಶೇ.40 ರಷ್ಟು ಕಮಿಷನ್ ವಿಚಾರವಾಗಿ ಬಿಜೆಪಿ ನಾಯಕರು ಸಾಕ್ಷಿ ನೀಡಿ ಎಂಬ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು
ಬಿಜೆಪಿ ಸರ್ಕಾರದಿಂದಲೇ ಕಮಿಷನ್ ಶುರುವಾಗಿದ್ದು, ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿರುವುದು ಸತ್ಯ. 2008ರಲ್ಲಿ ಬಿಜೆಪಿ ಸರ್ಕಾರದಿಂದಲೇ ಕಮಿಷನ್ ಶುರುವಾಯಿತು. ಅಪರೇಷನ್ ಕಮಲದಿಂದ ಈ ವಾತಾವರಣ ಸೃಷ್ಠಿಯಾಗಿದೆ. ಎಲ್ಲಾ ಪಕ್ಷಗಳ ಶಾಸಕರು ಗಣಿಗಾರಿಕೆಗೆ ಲೈಸೆನ್ಸ್ ಪಡೆದಿದ್ದಾರೆ. ಮರಳು ದಂಧೆ ಆರಂಭವಾಗಿದ್ದ ಬಿಜೆಪಿ ಸರ್ಕಾರದಿಂದ ಎಂದು ದೂರಿದರು.
ಗುತ್ತಿಗೆ ದಾರರಿಂದ ಕಮಿಷನ್ ಪಡೆಯುವುದು ಶೇ 3 ಮತ್ತು 4ರಷ್ಟಿದೆ. ಹಿಂಸೆ ಮಾಡಿ ಬಲವಂತವಾಗಿ ಕಮಿಷನ್ ಪಡೆಯಲಾಗುತ್ತಿದೆ. ಉಪನೋಂದಣಿ ಕಚೇರಿಯಲ್ಲಿ ಚಂದಾ ಎತ್ತುವುದೂ ಇದೆ. ಇದು ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುತ್ತಿದೆ. ನನ್ನ ಅವಧಿಯಲ್ಲೂ ಕೆಲವರು ಹಣ ಪಡೆದಿದ್ದಾರೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು..? ಇದನ್ನೆಲ್ಲಾ ಸರಿ ಮಾಡೋದು ಯಾರು ? ಎಂದು ಪ್ರಶ್ನಿಸಿದರು.
ಸರ್ಕಾರದ ಬಗ್ಗೆ ಕೆಟ್ಟ ಜನಾಭಿಪ್ರಾಯ ಇದೆ. ಪರ್ಸೆಂಟೇಜ್ ಸಂಸ್ಕೃತಿ ಜನರಿಗೆ ಗೊತ್ತಿದೆ. ಸರ್ಕಾರದ ಆಡಳಿತ ಯಂತ್ರ ದುರ್ಬಳಕೆಯಾಗುತ್ತಿದೆ ಎಂದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.