ಮನೆ ರಾಜ್ಯ ಹಲ್ಲೆ ಪ್ರಕರಣ:  ಮಾಜಿ ಸಚಿವ ಮುರುಗೇಶ್ ನಿರಾಣಿ,‌ ಸಹೋದರನ ವಿರುದ್ಧ ಎಫ್ ​ಐಆರ್ ದಾಖಲು

ಹಲ್ಲೆ ಪ್ರಕರಣ:  ಮಾಜಿ ಸಚಿವ ಮುರುಗೇಶ್ ನಿರಾಣಿ,‌ ಸಹೋದರನ ವಿರುದ್ಧ ಎಫ್ ​ಐಆರ್ ದಾಖಲು

0

ಬಾಗಲಕೋಟೆ: ಮುಧೋಳದ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮುರುಗೇಶ್ ನಿರಾಣಿ,‌ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್ ​ಐಆರ್ ದಾಖಲಾಗಿದೆ.

ನಿನ್ನೆ ಬೆಳಗ್ಗೆ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಇಂಗಳಗಿ ಕ್ರಾಸ್ ಬಳಿ ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಮೇಲೆ ಆರು ಜನ ಮುಖವಾಡ ಧರಿಸಿರುವ ಗೂಂಡಾಗಳು ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆ ಸಂಬಂಧ ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ನಿರಾಣಿ ಸಹೋದರರೇ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.