ಮನೆ ಸುದ್ದಿ ಜಾಲ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ: ಪ್ರಾಧ್ಯಾಪಕ ಅಮಾನತು

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ: ಪ್ರಾಧ್ಯಾಪಕ ಅಮಾನತು

0

ಮೈಸೂರು(Mysuru): ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ಆರೋಪದಲ್ಲಿ ಬಂಧಿತರಾಗಿರುವ ಇಲ್ಲಿನ ಭೂಗೋಳ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಎಚ್.ನಾಗರಾಜ್ ಅವರನ್ನು ಮೈಸೂರು ವಿಶ್ವವಿದ್ಯಾಲಯವು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಧಾರವಾಡದ ಕರ್ನಾಟಕ ವಿ.ವಿ. ಕುಲಸಚಿವ (ಮೌಲ್ಯಮಾಪನ) ಹುದ್ದೆಗೆ ನಿಯೋಜನೆಗೊಂಡಿದ್ದ ಅವರನ್ನು ಈಚೆಗೆ ಬೆಂಗಳೂರಿನ ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ, ಉನ್ನತ ಶಿಕ್ಷಣ ಇಲಾಖೆಯು ಅವರನ್ನು ಕುಲಸಚಿವ ಹುದ್ದೆಯಿಂದ ಬಿಡುಗಡೆಗೊಳಿಸಿ ಮಾತೃ ಸಂಸ್ಥೆ ಮೈಸೂರು ವಿಶ್ವವಿದ್ಯಾಲಯಕ್ಕೆ ಕಳುಹಿಸಿತ್ತು.

ಈಗ ಅವರನ್ನು ಮೈಸೂರು ವಿಶ್ವವಿದ್ಯಾಲಯವು ಏ.27ರಿಂದ ಪೂರ್ವಾನ್ವಯವಾಗುವಂತೆ ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಆದೇಶ ಹೊರಡಿಸಿದೆ.

ಇಲಾಖಾ ವಿಚಾರಣೆಗೆ ಸಿದ್ಧತೆ ನಡೆದಿದೆ. ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಕುಲಸಚಿವ ಪ್ರೊ.ಆರ್.ಶಿವಪ್ಪ ಪ್ರತಿಕ್ರಿಯಿಸಿದ್ದಾರೆ.

ಹಿಂದಿನ ಲೇಖನಸಂಪುಟ ಸಭೆ 11ಕ್ಕೆ ಮುಂದೂಡಿಕೆ
ಮುಂದಿನ ಲೇಖನಈ ದಿನದ ನಿಮ್ಮ ರಾಶಿ ಭವಿಷ್ಯ