ಹನೂರು: ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ಬಿಟಿ ಅವರ ನೇತೃತ್ವದ ತಂಡ ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ದಾಳಿ ನಡೆಸಿ
ಏಳು ಜನರನ್ನು ವಶಕ್ಕೆ ಪಡೆದು 5 ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಂಡಿರುವ ಘಟನೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಜರುಗಿದೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಭೇಟಿ ನೀಡಿದ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಟಿ ಕವಿತಾ ಹಾಗೂ ಅಬಕಾರಿ ಡಿಸಿ ನಾಗಶಯನ, ವಿಶೇಷ ಪೊಲೀಸ್ ತಂಡ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದರು ಇದರ ಪರಿಣಾಮ 193ಲೀಟರ್ ಮಧ್ಯ, 28ಸಾವಿರಾರು ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಮಹದೇಶ್ವರ ಬೆಟ್ಟದ ಒಟ್ಟು ಐದು ಪ್ರಕರಣಗಳನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲು ಮಾಡಲಾಗಿದೆ. ಸಿದ್ದಪ್ಪ, ಕುಮಾರ್, ಬಾಬು ಪೂಜಾರಿ,ಮಹೇಶ, ಮಾದೇವಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೆಲವರು ತಲೆ ಮರಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಶಶಿಕುಮಾರ್, ಸಬ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್ ಪ್ರಸಾದ್, ಈಶ್ವರ್ , ಪೇದೆಗಳಾದ ಸಿಂಗಂ ನಾಗರಾಜು, ಜೈ ಶಂಕರ್ ಪಾಲ್ಗೊಂಡಿದ್ದರು.