ಮನೆ ಅಪರಾಧ ಬಾಕಿಯಿದ್ದ ಕರೆಂಟ್ ಬಿಲ್ ಕೇಳಲು ಹೋದ ಜೆಸ್ಕಾಂ ಸಿಬ್ಬಂದಿಗಳ ಮೇಲೆ ಹಲ್ಲೆ

ಬಾಕಿಯಿದ್ದ ಕರೆಂಟ್ ಬಿಲ್ ಕೇಳಲು ಹೋದ ಜೆಸ್ಕಾಂ ಸಿಬ್ಬಂದಿಗಳ ಮೇಲೆ ಹಲ್ಲೆ

0

ಕಲಬುರಗಿ: ವಿದ್ಯುತ್ ಬಾಕಿ ಬಿಲ್ ಕೇಳಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ‌ ಪಟ್ಟಣದ ಖಾಜಿ‌ಗಲ್ಲಿಯಲ್ಲಿ ನಡೆದಿದೆ.

Join Our Whatsapp Group

ಜೆಸ್ಕಾಂ ಜೆಇ ಸಿದ್ದರಾಮಪ್ಪ, ಲೈನ್​ ಮ್ಯಾನ್​ ಇಜಾಜ್​​ ಹಲ್ಲೆಗೊಳಗಾದವರು. ಸದ್ಯ ಗಾಯಳುಗಳನ್ನು ಜೆಸ್ಕಾಂ ಸಿಬ್ಬಂದಿ ಆಳಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಸೀಂ ಜವಳೆ ಎನ್ನುವವರು ದಾಬಾ ಮತ್ತು ಮನೆ ಹದಿಮೂರು ಸಾವಿರ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಾಕಿ ಪಾವತಿಸದ ಹಿನ್ನೆಲೆ ಲೈನ್​ ಕಟ್ ಮಾಡಲಾಗಿತ್ತು. ಹಾಗಾಗಿ ಜೆಇ ಮತ್ತು ಲೈನಮ್ಯಾನ್​​ ಮೇಲೆ ಹಲ್ಲೆ ಮಾಡಿದ್ದಾರೆ.

ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಹಿಂದಿನ ಲೇಖನಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ:ಓರ್ವ ಸಾವು
ಮುಂದಿನ ಲೇಖನಕಲುಷಿತ ನೀರು ಸೇವಿಸಿ ಬಾಲಕ ಸಾವು ಪ್ರಕರಣ: ಸಿಎಂ‌ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ