ಕಲಬುರಗಿ: ವಿದ್ಯುತ್ ಬಾಕಿ ಬಿಲ್ ಕೇಳಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ಪಟ್ಟಣದ ಖಾಜಿಗಲ್ಲಿಯಲ್ಲಿ ನಡೆದಿದೆ.
ಜೆಸ್ಕಾಂ ಜೆಇ ಸಿದ್ದರಾಮಪ್ಪ, ಲೈನ್ ಮ್ಯಾನ್ ಇಜಾಜ್ ಹಲ್ಲೆಗೊಳಗಾದವರು. ಸದ್ಯ ಗಾಯಳುಗಳನ್ನು ಜೆಸ್ಕಾಂ ಸಿಬ್ಬಂದಿ ಆಳಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಸೀಂ ಜವಳೆ ಎನ್ನುವವರು ದಾಬಾ ಮತ್ತು ಮನೆ ಹದಿಮೂರು ಸಾವಿರ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಾಕಿ ಪಾವತಿಸದ ಹಿನ್ನೆಲೆ ಲೈನ್ ಕಟ್ ಮಾಡಲಾಗಿತ್ತು. ಹಾಗಾಗಿ ಜೆಇ ಮತ್ತು ಲೈನಮ್ಯಾನ್ ಮೇಲೆ ಹಲ್ಲೆ ಮಾಡಿದ್ದಾರೆ.
ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.














