ಮನೆ ರಾಜ್ಯ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದವರ ಮೇಲೆ ಹಲ್ಲೆ: ಇಬ್ಬರು ಪೊಲೀಸರ ಅಮಾನತು

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದವರ ಮೇಲೆ ಹಲ್ಲೆ: ಇಬ್ಬರು ಪೊಲೀಸರ ಅಮಾನತು

0

ಮಂಗಳೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ ಐ ಹಾಗೂ ಕಾನ್ಸ್ಟೇಬಲ್ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ.

Join Our Whatsapp Group

ಪುತ್ತೂರು ಡಿವೈಎಸ್ ಪಿ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನರಿಮೊಗರಿನ ಅವಿನಾಶ್ ನೀಡಿದ ದೂರಿನ ಮೇರೆಗೆ ಪುತ್ತೂರು ಡಿವೈಎಸ್ ಪಿ, ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ ಐ, ಪೇದೆ ಹರ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈ ಎಸ್ ಪಿ ರವರಿಗೆ ವಹಿಸಲಾಗಿದೆ.

ಹಿಂದಿನ ಲೇಖನಕಾಂಗ್ರೆಸ್ ಗ್ಯಾರಂಟಿ ನಂಬಿ ಜನರ ಮತ ಹಾಕಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ
ಮುಂದಿನ ಲೇಖನಪಕ್ಷವು ಗೆದ್ದಾಗ ಸಂಭ್ರಮಿಸುವ ಕಾರ್ಯಕರ್ತರಿಗೆ ಸೋತಾಗ ಪ್ರಶ್ನಿಸುವ ಹಕ್ಕಿದೆ: ಪ್ರತಾಪ್ ಸಿಂಹ