ಮನೆ ಅಪರಾಧ ಪ್ರೀತಿಯ ಹೆಸರಿನಲ್ಲಿ ಅತ್ಯಾಚಾರ, ಹತ್ಯೆ ಯತ್ನ: ಯುವಕನ ಬಂಧನ

ಪ್ರೀತಿಯ ಹೆಸರಿನಲ್ಲಿ ಅತ್ಯಾಚಾರ, ಹತ್ಯೆ ಯತ್ನ: ಯುವಕನ ಬಂಧನ

0

ಮೈಸೂರು(Mysuru): ಪ್ರೀತಿಯ ಹೆಸರಿನಲ್ಲಿ ಯುವತಿ ಮೇಲೆ ಆತ್ಯಾಚಾರವೆಸಗಿ, ಬಳಿಕ ಮದುವೆಗೆ ನಿರಾಕರಿಸಿ ಆಕೆಯ ಹತ್ಯೆಗೆ ಪ್ರಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮನೋಜ್ ಅಲಿಯಾಸ್ ಹೃತಿಕ್ ಬಂಧಿತ ಆರೋಪಿ.

ಮೈಸೂರಿನ ಹಲವು ಬಡಾವಣೆಗಳಲ್ಲಿ ತಲೆಯೆತ್ತಿರುವ ಬೇಕರಿಯೊಂದರ ಮಾಲೀಕನ ಪುತ್ರ ಮನೋಜ್ ಎಂಬಾತನ ಮೇಲೆ ಅತ್ಯಾಚಾರ ಹಾಗೂ ಹತ್ಯೆಗೆ ಯತ್ನಿಸಿದ ಆರೋಪ ಹೊರಿಸಿ ಯುವತಿಯೋರ್ವಳು ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ದೂರಿನಲ್ಲೇನಿದೆ ?

ಯುವತಿ ದೂರಿನಲ್ಲಿ ‘ಮನೋಜ್ ಅಲಿಯಾಸ್ ಹೃತಿಕ್ ಎಂಬಾತ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಓದುತ್ತಿದ್ದಾಗ ಪರಿಚಯವಾಗಿದ್ದು, ಕಳೆದ ನಾಲ್ಕೂವರೆ ವರ್ಷಗಳಿಂದ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ತು ಕರೆದು ಗೋಳಾಡಿ ನನ್ನನ್ನು ಬೆದರಿಸಿ ಪ್ರೀತಿಸುವುದಾಗಿ ಹೇಳಿದ್ದ.

ಸುಮಾರು ಎರಡು-ಮೂರು ಬಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನನ್ನು ಅವರ ಮನೆಗೆ ಕರೆದುಕೊಂಡು ಹೋಗಿ ಬಲವಂತವಾಗಿ ನನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ವಿಚಾರವನ್ನು ಅವರ ತಂದೆ, ತಾಯಿ ಮತ್ತವರ ಅಕ್ಕನಿಗೆ ತಿಳಿಸಿ, ಅವರ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಅವರು ನನ್ನನ್ನು ಬಾಯಿಗೆ ಬಂದಂತೆ ಬೈದು, ನಿನಗೆ ಸ್ವಲ್ಪ ಹಣವನ್ನು ಬೇಕಾದರೆ ಕೊಡುತ್ತೇವೆ ಎಂದರು.

ಅಷ್ಟೇ ಅಲ್ಲದೆ ಅವರ ಬೇಕರಿಯಲ್ಲಿ ಕೆಲಸ ಮಾಡುವ ಹೆಚ್.ಆರ್ ಅವರನ್ನು ಕರೆದುಕೊಂಡು ಬಂದು ಅವರಿಂದ ನನಗೆ ಬೈಯಿಸಿದ್ದಾರೆ.

ಜನವರಿ 23 ರಂದು ರಾತ್ರಿ ವೇಳೆ ಮನೋಜ್ ಬಂದು ನನಗೆ ಬಾಯಿಗೆ ಬಂದಂತೆ ಬೈದು ನನ್ನನ್ನು ಅವನ ಕಾರಿನಲ್ಲಿ ಕೂರಿಸಿಕೊಂಡು 20 ರಿಂದ 30 ಮಾತ್ರೆಗಳನ್ನು ಬಲವಂತವಾಗಿ ನನ್ನ ಬಾಯಿಗೆ ತುರುಕಿ ಸಾಯಿಸಲು ಪ್ರಯತ್ನಪಟ್ಟಿದ್ದಾನೆ. ನಂತರ ಆತನೇ ನನ್ನನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ. ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಸಂತ್ರಸ್ತೆ ದೂರನ್ನು ನೀಡಿದ್ದಾಳೆ.

ಮನೋಜ್ ತಂದೆ ಎಂ.ಎಸ್. ನಾರಾಯಣ್ ಸೇರಿದಂತೆ ಅವರ ಕುಟುಂಬ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಯುವತಿ ನೀಡಿರುವ ದೂರಿನ ಮೇರೆಗೆ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಅದಾನಿ ವಿರುದ್ಧ ಹಿಂಡನ್’ಬರ್ಗ್ ವರದಿ: ಆಂಡರ್ಸನ್ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಸುಪ್ರೀಂ ಕದತಟ್ಟಿದ ಶರ್ಮಾ
ಮುಂದಿನ ಲೇಖನಇಬ್ಬರನ್ನು ಬಲಿ ಪಡೆದಿದ್ದ ಕಾರು ಅಪಘಾತ ಪ್ರಕರಣ: ಯೂ-ಟ್ಯೂಬರ್ ಅರ್ಪಿತ್ ಬಂಧನ