ಚಾಮರಾಜನಗರ(Chamarajanagar): ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಡಿ ಗ್ರೂಪ್ ನೌಕರರ ಕಛೇರಿಯಲ್ಲೇ ವಿಷ ಸೇವಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸದ್ಯ ನೌಕರನ ಪರಿಸ್ಥಿತಿ ಗಂಭೀರವಾಗಿದ್ದು, ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏನಿದು ಘಟನೆ ? : ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾಮರಾಜನಗರದ ಸೆಂಟ್ ಜೋಸೆಫ್ ಶಾಲೆಗೆ ಸೇರಿಸಿ ನಗರದಲ್ಲೇ ಉಳಿದಿದ್ದಾರೆ. ಕಳೆದ ೧ ವರ್ಷದಿಂದ ವಸತಿ ಗೃಹಕ್ಕಾಗಿ ಅರ್ಜಿ ಸಲ್ಲಿಸಿ ಅಲೆದು ಸಾಕಾಗಿದ್ದರು. ಬುಧವಾರ ರೇಷ್ಮೆ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶ್ವೇತಾ ಅವರಿಗೆ ಮನವಿ ಸಲ್ಲಿಸಿ ಮತ್ತೊಮ್ಮೆ ವಸತಿ ಗೃಹ ಕಲ್ಪಿಸುವಂತೆ ಕೇಳಿಕೊಂಡಿದ್ದರು.
ಲೋಕೇಶ್ ಅವರಿಗೆ ಒಂದು ವರ್ಷಗಳಿಂದಲೂ ಮಾನಸಿಕ ಹಿಂಸೆ ನೀಡಿ, ಜಾತಿ ದೌರ್ಜನ್ಯ ಮಾಡುತ್ತಿದ್ದ ಅಧಿಕಾರಿ ಶ್ವೇತಾ ಅವರು ನಾನು ಇರುವವರೆಗೂ ನೀನು ವಸತಿ ಗೃಹ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ದರ್ಪದ ಮಾತುಗಳನ್ನು ಆಡಿದ್ದು, ಮನನೊಂದ ನೌಕರ ಕಛೇರಿಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಎಂದು ಲೋಕೇಶ್ ಅವರ ಪತ್ನಿ ಸುಧಾಮಣಿ ಮಾಹಿತಿ ನೀಡಿದರು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.