ಮನೆ ರಾಜ್ಯ ಆ.7 ದಸರಾ ಗಜ ಪಯಣಕ್ಕೆ ಚಾಲನೆ

ಆ.7 ದಸರಾ ಗಜ ಪಯಣಕ್ಕೆ ಚಾಲನೆ

0
ಸಾಂದರ್ಭಿಕ ಚಿತ್ರ

ಮೈಸೂರು (Mysuru): ನಾಡಹಬ್ಬ ದಸರಾಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಆಗಸ್ಟ್‌ 7 ರಂದು ಗಜ ಪಯಣಕ್ಕೆ ಚಾಲನೆ ದೊರೆಯಲಿದೆ.

ಆಗಸ್ಟ್‌ 7 ರಂದು ಬೆಳಿಗ್ಗೆ 9 ಗಂಟೆಯಿಂದ 9.35 ಗಂಟೆಯವರೆಗೆ ಹುಣಸೂರು ತಾಲೂಕಿನ ವೀರನಹೋಸಳ್ಳಿ ಗ್ರಾಮದಲ್ಲಿ ಗಜ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ ಸಚಿವರು ಎಸ್.ಟಿ.ಸೋಮಶೇಖರ್ ಕಾರ್ಯಕ್ರಮವನ್ನು ನೆರವೇರಿಸಿದರು.

ಸಚಿವರಾದ ಉಮೇಶ್‌ ಕತ್ತಿ ಅವರು ಉಪಸ್ಥಿತಿ ವಹಿಸಲಿದ್ದಾರೆ. ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಪಿ.ಮಂಜುನಾಥ್‌ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದಾ ಪಾಲನೇತ್ರ, ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸಾದ್, ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಮಲತಾ ಅಂಬರೀಶ್ ಸೇರಿದಂತೆ ವಿಧಾನಸಭೆ ಮತ್ತು ವಿಧಾನಪರಿಷತ್ ಶಾಸಕರುಗಳು, ನಿಗಮ ಮಂಡಳಿಯ ಅಧ್ಯಕ್ಷರುಗಳು ಉಪಸ್ಥಿತರಿರುವರು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ವಿ.ಕರಿಕಾಳನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ: 45 ನಿಮಿಷದೊಳಗೆ ಆದೇಶ ವಾಪಸ್‌ ಪಡೆದ ಮಂಗಳೂರು ಪೊಲೀಸರು
ಮುಂದಿನ ಲೇಖನಸಾಂಸ್ಕೃತಿಕ ಕಂಪು ಎಲ್ಲಡೆ ಪಸರಿಸಲಿ: ಕುಲಸಚಿವ ಪ್ರೊ.ಆರ್.ಶಿವಪ್ಪ