Saval
ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ: ಸಿದ್ದು, ಡಿಕೆಶಿಗೆ ಸಮನ್ಸ್ ಮರು ಜಾರಿ; ರಾಹುಲ್...
ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ...
ಲಂಚ ಪಡೆಯುತ್ತಿದ್ದ ನಂಜನಗೂಡು ಬಿಇಒ ಲೋಕಾಯುಕ್ತ ಬಲೆಗೆ
ಮೈಸೂರು: ಅಂಗವಿಕಲ ಶಿಕ್ಷಕ ನರಸಿಂಹಮೂರ್ತಿ ಅವರ ಮೂರು ತಿಂಗಳ ಗೌರವ ಧನ ಬಿಡುಗಡೆಗೆ ವಿಶೇಷ ಶಿಕ್ಷಕ ರಮೇಶ ಅವರ ಮೂಲಕ ₹ 5 ಸಾವಿರ ಲಂಚ ಪಡೆಯುತ್ತಿದ್ದ ನಂಜನಗೂಡು ಬಿಇಒ ಎ.ಟಿ.ಶಿವಲಿಂಗಯ್ಯ ಅವರು...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಶಂಕಿತನ ಬಂಧಿಸಿದ ಎನ್ಐಎ
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಪ್ರಮುಖ ಶಂಕಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬುಧವಾರ 18 ಕಡೆ ದಾಳಿ ನಡೆಸಿದ್ದ ಎನ್ಐಎ ತಂಡ,...
ಸಿದ್ದರಾಮಯ್ಯಗೆ ಜೆಡಿಎಸ್ ಸಾಮರ್ಥ್ಯ ತೋರಿಸುವೆ: ಎಚ್.ಡಿ.ದೇವೇಗೌಡ
ಹಾಸನ: ಜೆಡಿಎಸ್ ಸ್ಫರ್ಧಿಸಿರುವ ಮೂರು ಕ್ಷೇತ್ರಗಳನ್ನು ಗೆಲ್ಲಿಸಿಕೊಳ್ಳುವುದಲ್ಲದೇ, ಉಳಿದ ಕ್ಷೇತ್ರಗಳಲ್ಲೂ ಪಕ್ಷದ ಶಕ್ತಿಯನ್ನು ಬಿಜೆಪಿಗೆ ಕೊಡಿಸುವ ಮೂಲಕ ಸಿದ್ದರಾಮಯ್ಯ ಮಾತಿಗೆ ತಕ್ಕ ಉತ್ತರ ನೀಡುವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿರುಗೇಟು ನೀಡಿದರು.
ಪಟ್ಟಣದಲ್ಲಿ...
ಸುಬ್ರಹ್ಮಣ್ಯ: ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
ಸುಬ್ರಹ್ಮಣ್ಯ: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದೆ.
ಬಳ್ಪ ಗ್ರಾಮದ ರಮೇಶ್ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಹಾಗೂ ಅವರ...
ಅಧಿಕ ಬಡ್ಡಿ ನೀಡುವ ಎಸ್ ಬಿಐ ಅಮೃತ್ ಕಳಶ್ ಸ್ಕೀಮ್ ಮಾರ್ಚ್ 31ಕ್ಕೆ ಕೊನೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಫರ್ ಮಾಡಿರುವ ಹಲವು ಠೇವಣಿ ಯೋಜನೆಗಳಲ್ಲಿ ಅಮೃತ್ ಕಳಶ್ ಸ್ಪೆಷಲ್ ಎಫ್ ಡಿ ಸ್ಕೀಮ್ ಪ್ರಮುಖವಾದುದು. ರೆಗ್ಯುಲರ್ ಡೆಪಾಸಿಟ್ಗಳಿಗಿಂತ ಅಮೃತ್ ಕಳಶ್ ಪ್ಲಾನ್ ನಲ್ಲಿ ಹೆಚ್ಚು ಬಡ್ಡಿ...
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: 60 ಹುದ್ದೆಗಳು ಖಾಲಿ, ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಿ
ಕರ್ನಾಟಕದ ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಗುಮಾಸ್ತ, ಟೈಪಿಸ್ಟ್ ಮತ್ತು ಟೈಪಿಸ್ಟ್-ಕಾಪಿಯಿಸ್ಟ್ (ನಕಲುದಾರರು) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ನೇಮಕಗೊಳ್ಳಲು ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಯಾವುದೇ ಅಭ್ಯರ್ಥಿಯು ತನ್ನ ಅರ್ಜಿ...
ನೀತಿ ಸಂಹಿತೆ ಉಲ್ಲಂಘನೆ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ
ಬೆಂಗಳೂರು: ಲೋಕಸಭೆ ಚುನಾವಣೆ ಕಾವು ಜೋರಾಗಿರುವ ಬೆನ್ನಲ್ಲೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...
ಬೆಂಗಳೂರಿನಲ್ಲಿ ಜನರ ಬಳಿ ಹೋಗಿ ಮತ ಯಾಚಿಸುವ ಧೈರ್ಯ ಕಾಂಗ್ರೆಸ್ಗಿಲ್ಲ, ಜನರು ಕಾಂಗ್ರೆಸ್ಗೆ ಬಾಯ್...
ಬೆಂಗಳೂರು: ಬೆಂಗಳೂರಿನಲ್ಲಿ ಜನರ ಬಳಿ ಹೋಗಿ ಮತ ಯಾಚಿಸುವ ಧೈರ್ಯ ಬಿಜೆಪಿಗಿದೆ. ಆದರೆ ಕಾಂಗ್ರೆಸ್ಗೆ ಅಂತಹ ಧೈರ್ಯವಿಲ್ಲ. ಅಲ್ಲದೆ ಜನರು ಕಾಂಗ್ರೆಸ್ಗೆ ಬಾಯ್ ಬಾಯ್ ಹೇಳಲು ತೀರ್ಮಾನಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ...
ರಂಗೋಲಿಯಲ್ಲಿ ಮೂಡಿದ ಮತದಾನ ಜಾಗೃತಿ
ಮೈಸೂರು: ಲೋಕಸಭಾ ಚುನಾವಣೆ 2024 ರ ಹಿನ್ನೆಲೆ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮ ಪಂಚಾಯಿತಿ ದೇಬೂರು ಗ್ರಾಮದಲ್ಲಿ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದ್ದಾರೆ.
ದೇಬೂರು ಗ್ರಾಮದ ಲಕ್ಷ್ಮೀ ನಾರಾಯಣಸ್ವಾಮಿ ದೇಗುಲದ ಮುಂಭಾಗದ ರಸ್ತೆಯಲ್ಲಿ ಗ್ರಾಮದ ಸ್ವ- ಸಹಾಯ ಸಂಘದ ಮಹಿಳಯರು ಸೇರಿದಂತೆ ಇತರರು ಬಣ್ಣದ ಬಣ್ಣದ ರಂಗೋಲಿಗಳೊoದಿಗೆ ಮತದಾನ ಜಾಗೃತಿ ಘೋಷವಾಕ್ಯಗಳನ್ನು ಬಿಡಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು.
ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ಮಾತನಾಡಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಮತವು ಅತ್ಯಮೂಲ್ಯವಾಗಿದ್ದು, ಯಾರೊಬ್ಬರು ಮತದಾನದಿಂದ ಹೊರಗೊಳಿಯದೆ ತಮ್ಮ ಸಂವಿಧಾನದ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು. ಹಾಗೂ ಚುನಾವಣೆ ಸಂಬoಧ ಯಾವುದೇ ದೂರುಗಳಿದ್ದಲ್ಲಿ ಸಿ-ವಿಜಿಲ್ ಆಪ್ ಮೂಲಕ ಸಲ್ಲಿಸುವಂತೆ ತಿಳಿಸಿದರು. ಬಳಿಕ ಅತ್ಯುತ್ತಮವಾಗಿ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ವಿತರಿಸಿದರು.
ವೇದಿಕೆ ಕಾರ್ಯಕ್ರಮ ಬಳಿಕ ಮತದಾನ ಪ್ರಚಾರ ವಾಹನದೊಂದಿಗೆ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಮಹಿಳೆಯರು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಮತದಾನದ ಮಹತ್ವ ಸಾರಿದರು.





















