ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ರಾಯಚೂರು(Raichuru): ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಣಿಕೆಲ್ಲೂರ ಗ್ರಾಮದ ಬಳಿ ನಡೆದಿದೆ.
ಜಿಲ್ಲೆಯ ಮಸ್ಕಿ ತಾಲೂಕಿನ ಕುಣಿಕೆಲ್ಲೂರದಿಂದ ಸಂತೆಕೆಲ್ಲೂರಿಗೆ 40ಕ್ಕೂ ಹೆಚ್ಚು ಮಕ್ಕಳು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಆಟೋ ಪಲ್ಟಿಯಾಗಿದೆ ಎನ್ನಲಾಗಿದೆ.
ಸದ್ಯ ಗಾಯಗೊಂಡ ಮಕ್ಕಳನ್ನು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪಾಲಕರು ಹಾಗೂ ಸಂಬಂಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆ ಆಗಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ಹರಸಾಹಸ ಪಡುವ ಸ್ಥಿತಿ ವಾತಾವರಣ ನಿರ್ಮಾಣವಾಗಿದೆ.
ಸಂತೆಕೆಲ್ಲೂರ ಗ್ರಾಮದಿಂದ ಮಟ್ಟೂರು ಮಧ್ಯೆ ಸಾರಿಗೆ ಬಸ್ ಸೌಲಭ್ಯವಿಲ್ಲ. ಹೀಗಾಗಿ ಮಕ್ಕಳು ಖಾಸಗಿ ವಾಹನದಲ್ಲಿ ಶಾಲಾ – ಕಾಲೇಜಿಗೆ ಹೋಗಿ ಬರಬೇಕಿದೆ. ಬಸ್ ಸೌಲಭ್ಯ ಕಲ್ಪಿಸಲು ಸಂಬಂಧಿಸಿದವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಇದಕ್ಕೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.