ಅಯೋಧ್ಯೆ: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ.
ಶತ ಶತಮಾನಗಳ ಕನಸು, ಕೋಟ್ಯಂತರ ರಾಮ ಭಕ್ತರ ಅವಿರತ ಹಾರೈಕೆ, ಅದೆಷ್ಟೋ ಕರಸೇವಕರ ಪರಿಶ್ರಮದ ಫಲವಿಂದು ಭರತ ಖಂಡದ ಪುಣ್ಯ ಪುರ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮ ಮೂರ್ತಿಗೆ ಅಭಿಜಿನ್ ಸುಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ನಡೆದಿದೆ.
ಶತಮಾನಗಳಿಂದ ನಡೆದು ಬಂದ ರಾಮ ಜನ್ಮಭೂಮಿ ವಿವಾದ ಇಂದಿಗೆ ಅಧಿಕೃತವಾಗಿ ಕೊನೆಯಾಗಿದೆ. ತ್ರೇತಾಯುಗದಲ್ಲಿ ದಶರಥ- ಕೌಸಲ್ಯಾ ನಂದನನಾಗಿ ನಡೆದಾಡಿದ್ದ ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಇದೀಗ ಅದೇ ರಾಮನಿಗೆ ಭವ್ಯ ಮಂದಿರ ಲೋಕಾಪರ್ಣೆಯಾಗಿದೆ. 2.7 ಏಕರೆ ವಿಸ್ತೀರ್ಣದ ರಾಮ ಮಂದಿರದಲ್ಲಿ 51 ಇಂಚು ಎತ್ತರದ ಶ್ರೀಬಾಲರಾಮನ ಮೂರ್ತಿಗೆ ಪ್ರಾಣ ನೀಡಲಾಗಿದೆ. ಈ ಮೂಲಕ ಶ್ರೀರಾಮನ ದಿವ್ಯದೃಷ್ಠಿ ಮನುಕುಲದ ಮೇಲೆ ಹರಿದಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣಪ್ರತಿಷ್ಠೆಯಲ್ಲಿ ಭಾಗವಹಿಸಿದ್ದಾರೆ. ಸುಮಾರು ಏಳು ಸಾವಿರ ಮಂದಿ ವಿಶೇಷ ಆಹ್ವಾನಿತರ ಸಮ್ಮುಖದಲ್ಲಿ, ಕೋಟ್ಯಂತರ ಜನರು ನೇರಪ್ರಸಾರದಲ್ಲಿ ನೋಡುತ್ತಿದ್ದಂತೆ ಕೋಟಿ ಕೋಟಿ ಜನರ ಹೃದಯ ಕಮಲದಲ್ಲಿ ನೆಲೆನಿಂತಿರುವ ಪ್ರಭು ರಾಮ ಕಣ್ಣರಳಿಸಿ ದರ್ಶನ ನೀಡಿದ್ದಾನೆ.
ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ಈ ಮಹತ್ವದ ಸಮಾರಂಭವನ್ನು ಜಾಗತೀಕರಣಗೊಳಿಸುವ ನಿಟ್ಟಿನಲ್ಲಿ ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ಈ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದಾರೆ.
ಮಧ್ಯಾಹ್ನ 12.20 ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು 12, 45ರವರೆಗೆ ನಡೆದಿದೆ. ಸುಮಾರು 2 ಗಂಟೆಗಳ ಕಾಲ 25 ರಾಜ್ಯದಗಳ ವಿವಿಧ ಸಂಗೀತ ವಾದ್ಯಗಳ ಮಂಗಲ ಧ್ವನಿ ಕಾರ್ಯಕ್ರಮವೂ ನೆರವೇರಿದೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ಅಯೋಧ್ಯೆಯ ಇಡೀ ನಗರವನ್ನು 2500 ಕ್ವಿಂಟಾಲ್ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದ್ದು, ಪ್ರಾಣ ಪ್ರತಿಷ್ಠೆಯ ನಂತರ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ.
ಆದರೆ ಜನಸಂದಣಿ ಕಡಿಮೆಯಾದ ನಂತರ ಜನವರಿ 27ರ ನಂತರವೇ ದೇವಾಲಯಕ್ಕೆ ಭೇಟಿ ನೀಡುವಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭಕ್ತರಲ್ಲಿ ವಿನಂತಿ ಮಾಡಿದೆ.
ಸಮಾರಂಭದಲ್ಲಿ ಎನ್ಎಸ್ಜಿ ಸ್ನೈಪರ್ಗಳ ಎರಡು ತಂಡಗಳು, ಆ್ಯಂಟಿ ಡ್ರೋನ್ ತಂತ್ರಜ್ಞಾನ ಹೊಂದಿದ ಎಟಿಎಸ್ ಕಮಾಂಡೋಗಳ ಆರು ತಂಡಗಳು ಮತ್ತು ಯುಪಿ ಮತ್ತು ಅರೆಸೇನಾ ಪಡೆಗಳ 15,000 ಪೊಲೀಸ್ ಸಿಬ್ಬಂದಿಯನ್ನು ಅಯೋಧ್ಯೆಯ ಭದ್ರತೆಗಾಗಿ ನಿಯೋಜಿಸಲಾಗಿದೆ. ಆರ್ ಎಸ್ ಎಸ್ ನ ಸರಸಂಘ ಚಾಲಕ ಮೋಹನ್ ಭಾಗವತ್, ರಾಜ್ಯಪಾಲೆ ಆನಂದಿ ಬೆನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಪಾಲ್ಗೊಂಡಿದ್ದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.