ಮನೆ ಅಪರಾಧ ಮೆಗ್ಗಾನ್ ಆಸ್ಪತ್ರೆಗೆ ಬಿ.ವೈ.ವಿಜಯೇಂದ್ರ ಭೇಟಿ: ಚಾಕು ಇರಿತಕ್ಕೊಳಗಾದ ಯುವಕನ ಆರೋಗ್ಯ ವಿಚಾರಣೆ

ಮೆಗ್ಗಾನ್ ಆಸ್ಪತ್ರೆಗೆ ಬಿ.ವೈ.ವಿಜಯೇಂದ್ರ ಭೇಟಿ: ಚಾಕು ಇರಿತಕ್ಕೊಳಗಾದ ಯುವಕನ ಆರೋಗ್ಯ ವಿಚಾರಣೆ

0

ಶಿವಮೊಗ್ಗ(Shivamogga):  ಸೋಮವಾರ ಚಾಕು ಇರಿತಕ್ಕೆ ಒಳಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪ್ರೇಮ್​​​ ಸಿಂಗ್​ನನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ರಾಘವೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ, ಮೊನ್ನೆಯೆಲ್ಲಾ ಬ್ಯಾಟ್ ಹಿಡಿದುಕೊಂಡು ಓಡಾಡುತ್ತಿದ್ದವರೆಲ್ಲ ಇಂದು ಚಾಕು, ಚೂರಿ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಅಂತವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಪ್ರೇಮ್ ಸಿಂಗ್​​​ಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಕ್ಕ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕೆಲವು ದಿನಗಳ ಕಾಲ ಚಿಕಿತ್ಸೆ ಅಗತ್ಯ ಇದೆ ಎಂದು ಹೇಳಿದರು.

ದೇವರು ದೊಡ್ಡವನು , ಚಾಕು ಇರಿತಕ್ಕೆ ಒಳಗಾಗಿದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾರು ಏನ್ ಬೇಕಾದರೂ ಮಾಡಬಹುದು ಎನ್ನುವ ಮನಸ್ಥಿತಿ ಇದೆ. ನಿನ್ನೆ ಗೃಹ ಸಚಿವರು ಇಲ್ಲಿಗೆ ಭೇಟಿ‌ ನೀಡಿದ್ದಾರೆ. ಈ ರೀತಿ ದುಷ್ಕೃತ್ಯ ಎಸಗುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲು ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ ಎಂದರು.

ಇದಕ್ಕೂ ಮುನ್ನ ತಮ್ಮ ಸಹೋದರ, ಸಂಸದ ಬಿ.ವೈ.ರಾಘವೇಂದ್ರ ರವರ ಹುಟ್ಟು ಹಬ್ಬದ ನಿಮಿತ್ತ ರವೀಂದ್ರ ನಗರದ ಗಣಪತಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗಿಯಾದರು.

ಹಿಂದಿನ ಲೇಖನಶಿವಮೊಗ್ಗದಲ್ಲಿ ಫ್ಲೆಕ್ಸ್ ತೆರವು ವಿವಾದ: ಗುರುವಾರದವರೆಗೆ 144 ಸೆಕ್ಷನ್ ಜಾರಿ
ಮುಂದಿನ ಲೇಖನವಿವೇಕ ಸ್ಮಾರಕ ಜಾಗದಲ್ಲಿ ಎನ್ ಟಿ ಎಂ ಶಾಲೆ ನಿರ್ಮಿಸುವಂತೆ ಪ್ರತಿಭಟನೆ