ಮೈಸೂರು(Mysuru): ಮಹರ್ಷಿ ವಿದ್ಯಾ ಸಂಸ್ಥೆಯಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ 6 ವರ್ಷದೊಳಗಿನ ಮಕ್ಕಳಿಗೆ ರಾಧಾಕೃಷ್ಣ ವೇಷಭೂಷಣ ಸ್ಪರ್ಧೆಯಲ್ಲಿ 250 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡ ರಾಜಾರಾಂ ಮಾತನಾಡಿ, ಯಾವುದೇ ಜಾತಿ ಭೇದವಿಲ್ಲದೇ ಜಗತ್ತಿನಾದ್ಯಂತ ಶ್ರೀಕೃಷ್ಣನನ್ನು ಆರಾಧಿಸಲಾಗುತ್ತಿದೆ ಎಂದರು.
ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ವಿಚಾರಗಳು ಪ್ರಸ್ತುತವಾಗಿವೆ. ಚತುರನಾಗಿದ್ದ ಕೃಷ್ಣನ ಮಾರ್ಗದರ್ಶನದಿಂದ ಮಹಾಭಾರತದಲ್ಲಿ ಪಾಂಡವರು ಗೆಲುವು ಸಾಧಿಸಲು ಸಾಧ್ಯವಾಯಿತು. ಯಾದವ ಕುಲದಲ್ಲಿ ಜನ್ಮ ತಾಳಿದ ಮಾನವ ದೈವ ಸ್ವರೂಪನಾಗಿರುವುದಕ್ಕೆ ಕೃಷ್ಣ ಉದಾಹರಣೆಯಾಗಿದ್ದಾನೆ. ಇದಕ್ಕೆ ಯಾದವ ಕುಲ ಬಾಂಧವರು ಹೆಮ್ಮೆ ಪಡಬೇಕು ಎಂದು ತಿಳಿಸಿದರು.
ಕೃಷ್ಣನ ತತ್ವ ವಿಚಾರಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಕೃಷ್ಣನ ಜೀವನದ ಕಥೆಗಳು ನಮ್ಮ ಜೀವನಕ್ಕೆ ಪ್ರೇರಣೆಯಾಗಬೇಕು. ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಮಾನವ ಜನ್ಮ ಮಹತ್ವವಾಗಿದ್ದು, ಉತ್ತಮ ಕಾರ್ಯಗಳನ್ನು ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಸ್ಪರ್ಧೆಯ ವಿಜೇತರು
ಹೆಬ್ಬಾಳ ನಿವಾಸಿ ಪ್ರದೀಪ್ ಬಾಬು, ರಂಜಿತಾ ಅವರ ಪುತ್ರ ಜೀವಿತ್ ರವರೆಗೆ ಮೊದಲನೇ ಬಹುಮಾನ 2222 ರೂ.ನಗದು ಹಾಗೂ ಆಕರ್ಷಕ ಬಹುಮಾನ, ಪಡುವಾರಹಳ್ಳಿ ನಿವಾಸಿ ವಿನೋದ್ ರಾಜ್ ಹಾಗೂ ಲಾವಣ್ಯ ಅವರ ಪುತ್ರ ಶೌರ್ಯ ವಿ ರಾಜ್ ಗೆ ದ್ವಿತೀಯ ಬಹುಮಾನ 1111ರೂ ನಗದು ಹಾಗೂ ಬಹುಮಾನ ಮತ್ತು ತೃತೀಯ ಬಹುಮಾನ ಕನಕಗಿರಿ ನಿವಾಸಿ ಶಿವು ರವರ ಪುತ್ರಿ ದಿಶಾ ಎಸ್ ರವರಿಗೆ 555ರೂ ನಗದು ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಲ್ಲ ವೇಷಭೂಷಣ ಸ್ಪರ್ಧೆಯಲ್ಲಿ ಭಾಗಿ ಆದ ಎಲ್ಲ ಮಕ್ಕಳಿಗೂ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಟಿ ಎಸ್ ಶ್ರೀವತ್ಸ , ಸುಜೀವ್ ಫೌಂಡೇಶನ್ ಅಧ್ಯಕ್ಷರಾದ ರಾಜಾರಾಮ್ , ಉದ್ಯಮಿ ಪುರಾಣಿಕ್ , ಮಹರ್ಷಿ ವಿದ್ಯಾಸಂಸ್ಥೆಯ ತೇಜಸ್ ಶಂಕರ್ , ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ , ಜಯಶ್ರೀ , ಸವಿತಾ , ಅಪೂರ್ವ ಸುರೇಶ್ , ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ , ಅಜಯ್ ಶಾಸ್ತ್ರಿ , ವಿನಯ್ ಕಣಗಾಲ್ , ರಾಕೇಶ್ ಕುಂಚಿಟಿಗ , ಸುಚೀಂದ್ರ , ಚಕ್ರಪಾಣಿ , ಜೀವನ್ , ಹರೀಶ್ ನಾಯ್ಡು , ನವೀನ್ ಕೆಂಪಿ , ದುರ್ಗಾಪ್ರಸಾದ್, ಚೇತನ್ ಕಾಂತರಾಜು ಹಾಜರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.