ಅಯೋಧ್ಯೆ: ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರದಿಂದ 84 ಕಿ.ಮೀ ದೂರದವರೆಗೂ ಯಾವುದೇ ಮದ್ಯದಂಗಡಿ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
ಶ್ರೀರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಯುಪಿ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿ ನೀಡಿದರು. ಅಯೋಧ್ಯೆಯ 84 ಕೋಸಿ ಪರಿಕ್ರಮ ಮಾರ್ಗವನ್ನು ಮದ್ಯ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೆ ಅದಾಗಲೇ ಇರುವ ಮದ್ಯದ ಅಂಗಡಿಗಳನ್ನು ತೆಗೆದುಹಾಕಲಾಗುವುದು ಎಂದರು.
ಅಯೋಧ್ಯೆಯೊಂದಿಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ, ಸುಲ್ತಾನ್ಪುರ ಪ್ರದೇಶಗಳನ್ನು ಶ್ರೀರಾಮ ಜನ್ಮಭೂಮಿಯ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಸೇರಿಸಲಾಗುವುದು. ಪರಿಕ್ರಮ ಮಾರ್ಗದಲ್ಲಿ ಮದ್ಯದಂಗಡಿ ಇರುವುದಿಲ್ಲ. ಈಗಾಗಲೇ ಇರುವ ಎಲ್ಲ ಅಂಗಡಿಗಳನ್ನು ತೆಗೆದುಹಾಕಲಾಗುವುದು. ಪರಿಕ್ರಮ ಪ್ರದೇಶದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.
ವಾಸ್ತವವಾಗಿ, ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಅವರು ರಾಮಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿಯಾಗಲು ಬಂದಿದ್ದರು. ಸಭೆಯ ನಂತರ ಮಾತನಾಡಿದ ಅವರು, ಶ್ರೀರಾಮ ಮಂದಿರ ಕ್ಷೇತ್ರವನ್ನು ಈಗಾಗಲೇ ಮದ್ಯ ಮುಕ್ತ ಮಾಡಲಾಗಿದೆ. ಇದೀಗ 84 ಕೋಸ್ ಪರಿಕ್ರಮ ಮಾರ್ಗದಿಂದಲೂ ಮದ್ಯದಂಗಡಿಗಳನ್ನು ತೆಗೆಯಲಾಗುವುದು. ಇದಕ್ಕಾಗಿ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ.
ಇಡೀ ಅಯೋಧ್ಯೆ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಈ ನಿಷೇಧ ಅನ್ವಯಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮಾತ್ರ ಅನ್ವಯಿಸುತ್ತದೆ. ಈ ಭಾಗದಲ್ಲಿ 500ಕ್ಕೂ ಹೆಚ್ಚು ಮದ್ಯದಂಗಡಿಗಳಿವೆ ಎಂದು ಹೇಳಲಾಗುತ್ತಿದೆ. ಮದ್ಯ ನಿಷೇಧದ ಘೋಷಣೆಯ ನಂತರ ಈ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ. ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.
ಜನವರಿ 22ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಪ್ರವಾಸದಲ್ಲಿದ್ದಾರೆ. ಇಲ್ಲಿ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ಮತ್ತು ಜನವರಿ 30ರಂದು ಪ್ರಧಾನಿ ಮೋದಿ ಆಗಮನದ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಇದಲ್ಲದೇ ಇನ್ನೂ ಹಲವು ಕಾರ್ಯಕ್ರಮಗಳನ್ನು ಪ್ರಸ್ತಾಪಿಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.