ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚೆನ್ನೈ(Chennai): ಪೂಜಾ ಸ್ಥಳಗಳಲ್ಲಿನ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿತಮಿಳುನಾಡಿನಾದ್ಯಂತ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ.
ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಾಲಯಗಳಲ್ಲಿ ಮೊಬೈಲ್ ಫೋನ್ ಇಡಲು ಲಾಕರ್ ಗಳನ್ನು ನಿರ್ಮಾಣ ಮಾಡಬೇಕೆಂದು ಕೋರ್ಟ್ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.
ದೇವಾಲಯಗಳಲ್ಲಿ ಈ ಆದೇಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಭದ್ರತಾ ಸಿಬಂದಿಯನ್ನು ನೇಮಕ ಮಾಡಲಾಗುವುದು ಎಂದು ಕೋರ್ಟ್ ತಿಳಿಸಿದೆ. ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದೊಳಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶವನ್ನು ಹೊರಡಿಸಿದೆ.
ಮೊಬೈಲ್ ಫೋನ್ ಗಳಿಂದಾಗಿ ದೇವಾಲಯದೊಳಗೆ ಭಕ್ತರ ಗಮನ ಬೇರೆಡೆ ಸೆಳೆಯುತ್ತದೆ. ಅಲ್ಲದೇ ದೇವರ ಫೋಟೋ ಕ್ಲಿಕ್ಕಿಸುವುದು ಆಗಮ ಶಾಸ್ತ್ರ ನಿಯಮದ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದರು. ಛಾಯಾಗ್ರಹಣ ದೇವಾಲಯಗಳ ಭದ್ರತೆಗೂ ಅಪಾಯವನ್ನುಂಟು ಮಾಡುತ್ತದೆ ಎಂದು ದೂರಿರುವ ಅರ್ಜಿದಾರರು, ಮಹಿಳಾ ಭಕ್ತರ ಅನುಮತಿ ಇಲ್ಲದೇ ಫೋಟೋ ತೆಗೆಯುವುದು ನಿಯಮಗಳ ಉಲ್ಲಂಘನೆಯಾಗಲಿದೆ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.