ಮನೆ ರಾಜ್ಯ ಬೆಂಗಳೂರು ಬಂದ್: ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 13 ಪ್ಲೈಟ್​ ರದ್ದು

ಬೆಂಗಳೂರು ಬಂದ್: ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 13 ಪ್ಲೈಟ್​ ರದ್ದು

0

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ರೊಚ್ಚಿಗೆದ್ದ ರೈತರು, ಕನ್ನಡ ಪರ ಸಂಘಟನೆಗಳು ಬಂದು ತೊಟ್ಟು ನೀರು ಕೂಡ ಬಿಡಬಾರದು ಎಂದು ಆಕ್ರೋಶ ಹೊರ ಹಾಕಿ ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸಿವೆ.

Join Our Whatsapp Group

ಆದರೆ ಮತ್ತೊಂದೆಡೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಲಿ ಖಾಲಿಯಾಗಿದ್ದು ಬಂದ್ ಎಫೆಕ್ಟ್​ನಿಂದಾಗಿ ಹೊರ ರಾಜ್ಯಗಳಿಂದ ಆಗಮಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಪ್ರಯಾಣಿಕರಿಲ್ಲದ ಕಾರಣ ಅನೇಕ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ .

ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ ಗಳನ್ನ ರದ್ದು ಮಾಡಿದ್ದಾರೆ.

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ಇನ್ನು ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ.

ಹಿಂದಿನ ಲೇಖನಮಲ್ಲೇಶ್ವರದ ಶ್ರೀ ವೇಣುಗೋಪಾಲ ಸ್ವಾಮಿ
ಮುಂದಿನ ಲೇಖನಪ್ರಾಯಶ್ಚಿತ್ತವು ಹೆಮ್ಮೆಗಿಂತ ಉತ್ತಮ