ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಟೋಲ್ ದರವನ್ನು 15 ದಿನದಲ್ಲೇ ಹೆಚ್ಚಳ ಮಾಡಲಾಗಿದ್ದು, ನಾಳೆಯಿಂದಲೇ (ಏಪ್ರಿಲ್ 1) ಈ ಪರಿಷ್ಕೃತ ದರ ಜಾರಿಗೆ ಬರಲಿದೆ.
ಕಾರ್, ವ್ಯಾನ್, ಜೀಪ್’ಗಳ ಏಕಮುಖ ಟೋಲ್ ಅನ್ನು 135ರಿಂದ 165ಕ್ಕೆ ಏರಿಸಲಾಗಿದೆ. ದ್ವಿಮುಖ ಸಂಚಾರ ದರವು 205ರಿಂದ 250ಕ್ಕೆ ಏರಿಕೆಗೊಂಡಿದೆ. ಲಘು ವಾಹನಗಳು, ಮಿನಿ ಬಸ್ ಗಳ ಏಕಮುಖ ಟೋಲ್ 220ರಿಂದ 270ಕ್ಕೆ ಹಾಗೂ ದ್ವಿಮುಖ ಸಂಚಾರಕ್ಕೆ 405 (75 ಹೆಚ್ಚಳ) ನಿಗದಿ ಆಗಿದೆ.
ಟ್ರಕ್, ಬಸ್, ಎರಡು ಆಕ್ಸೆಲ್ ವಾಹನಗಳ ಏಕಮುಖ ಟೋಲ್ ಬರೋಬ್ಬರಿ 565ಕ್ಕೆ ಏರಿಕೆ ಆಗಿದೆ (105 ಹೆಚ್ಚಳ). ದ್ವಿಮುಖ ಸಂಚಾರಕ್ಕೆ 850 ನಿಗದಿಪಡಿಸಲಾಗಿದೆ. (160 ಹೆಚ್ಚಳ).
3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ದರವು 615 (115 ಏರಿಕೆ) ಹಾಗೂ ದ್ವಿಮುಖ ಸಂಚಾರಕ್ಕೆ 925 (225 ಹೆಚ್ಚಳ) ಏರಿದೆ. ಭಾರಿ ವಾಹನಗಳ ಏಕಮುಖ ಟೋಲ್ 885 (165 ಹೆಚ್ಚಳ), ದ್ವಿಮುಖ ಸಂಚಾರಕ್ಕೆ 1,330 (250 ಹೆಚ್ಚಳ) ನಿಗದಿ ಆಗಿದೆ.
7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ದರವು 1,080 (200 ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ 1,620 (₹305 ಏರಿಕೆ) ನಿಗದಿ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಇದೇ ಮಾರ್ಚ್ 12ರಂದು ಈ ಹೆದ್ದಾರಿಯನ್ನು ಉದ್ಘಾಟಿಸಿದ್ದರು. ಮಾ. 14ರಿಂದ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ ಹಾಗೂ ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹ ಆರಂಭಗೊಂಡಿತ್ತು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.