ಮನೆ ಅಪರಾಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

0

ಬೆಂಗಳೂರು: ಬೆಂಗಳೂರಿನ ಲಗ್ಗೆರೆ ಬಳಿಯ ಚೌಡೇಶ್ವರಿನಗರದ ಹಳ್ಳಿರುಚಿ ಹೊಟೇಲ್ ಮುಂಭಾಗದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ.

Join Our Whatsapp Group

ಮೃತರನ್ನು ರವಿ ಅಲಿಯಾಸ್ ಮತ್ತಿರವಿ (42) ಎಂದು ಗುರುತಿಸಲಾಗಿದೆ.

ಸಿಎಂಹೆಚ್ ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿದ ಕಿರಾತಕರು ಹಲ್ಲೆ ನಡೆಸಿದ್ದಾರೆ. ನಂತರ ಅವರು ಹಳ್ಳಿರುಚಿ ಹೊಟೇಲ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿದ್ದು ಕೊನೆಗೆ ತಲೆಯ ಮೇಲೆ ಸೈಜ್ ಕಲ್ಲನ್ನು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಘಟನೆ ನಡೆದದ್ದು ಹೇಗೆ?

ಬೈಕ್ ಗಳಲ್ಲಿ ಬಂದ ಐದಾರು ಮಂದಿಯಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಇವರು ಹತ್ಯೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ಪ್ಲೆಕ್ಸ್’ನಲ್ಲಿ ರವಿಕುಮಾರ್ ಪೋಟೋ ಹರಿದು ಹಾಕಿದ್ದರು.

ವೃತ್ತಿಯಲ್ಲಿ ಟೆಂಪೋ ಟ್ರಾವೆಲ್ಲರ್ ಚಾಲಕನಾಗಿದ್ದ ರವಿ ಇಂದು ಸಂಜೆ ಕೆಲಸ ಮುಗಿಸಿ ಮನೆ ಹತ್ತಿರ ಬಂದಿದ್ದರು. ಮನೆಯಿಂದ ಹೊರ ಬರುತ್ತಿದ್ದಂತೆಯೆ ಹಂತಕರು ದಾಳಿ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನು ಈ ಕಿರಾಕರು ಅಟ್ಟಾಡಿಸಿ ಹತ್ಯೆ ಮಾಡಿದ್ದಾರೆ.

ಸ್ಥಳಕ್ಕೆ ಬಂದ ನಂದಿನಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶವವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.

ಹಿಂದಿನ ಲೇಖನಮಹಿಳೆಯನ್ನು ಕೊಂದು 6 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್’ನಲ್ಲಿಟ್ಟಿದ್ದ ವ್ಯಕ್ತಿಯ ಬಂಧನ
ಮುಂದಿನ ಲೇಖನರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ