ಮನೆ ಅಪರಾಧ ಚಾಮುಂಡಿಬೆಟ್ಟದ ತಾವರೆಕಟ್ಟೆ ಬಳಿ ವ್ಯಕ್ತಿಯ ಬರ್ಬರ ಕೊಲೆ

ಚಾಮುಂಡಿಬೆಟ್ಟದ ತಾವರೆಕಟ್ಟೆ ಬಳಿ ವ್ಯಕ್ತಿಯ ಬರ್ಬರ ಕೊಲೆ

0

ಮೈಸೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ  ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ತಾವರಕಟ್ಟೆ ಬಳಿ ನಡೆದಿದೆ.

ಘಟನಾ ಸ್ಥಳಕ್ಕೆ ಕೆ.ಆರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದಾರೆ. ಕೊಲೆಯಾಗಿರುವ ಬಗ್ಗೆ ಬುಧವಾರ ಬೆಳಗ್ಗೆ ತಿಳಿದು ಬಂದಿದ್ದು, ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.