ಮನೆ ಅಪರಾಧ ವ್ಯಾಪಾರದಲ್ಲಿ ಚೌಕಾಸಿ; ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ ಮಾಲೀಕ

ವ್ಯಾಪಾರದಲ್ಲಿ ಚೌಕಾಸಿ; ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ ಮಾಲೀಕ

0

ಮೈಸೂರು: ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಕಿರಿಕ್ ಆಗಿದ್ದು ಕತ್ತರಿಯಿಂದ ಗ್ರಾಹಕನಿಗೆ ಅಂಗಡಿ ಮಾಲೀಕ ಚುಚ್ಚಿ ಗಾಯಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಬೈಪಾಸ್ ರಸ್ತೆ ಬಳಿ ನಡೆದಿದೆ.

Join Our Whatsapp Group

ಘಟನೆ ಸಂಬಂಧ ಹುಣಸೂರು ಟೌನ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕುಶಾಲ್ ನಗರದ ಬೈಚನಹಳ್ಳಿ ಗ್ರಾಮದ ನಂದೀಶ್‌ ಎಂಬುವವರಿಗೆ ಮುರುಗೇಶ್ ಜೋಗಿ ಮಾರ್ಕೆಟಿಂಗ್​ನ ಮಾಲೀಕ ಮುರುಗೇಶ್ ಜೋಗಿ ಕತ್ತರಿಯಿಂದ ಚುಚ್ಚಿದ್ದಾರೆ.

ಹಲ್ಲೆಗೊಳಗಾದ ನಂದೀಶ್ ಅವರು ತಮ್ಮ ದೊಡ್ಡಮ್ಮನ ಮಗ ರಮೇಶ್ ಜೊತೆ ವ್ಯಾಪರದ ನಿಮಿತ್ತ ಕುಶಾಲನಗರದಿಂದ ಹುಣಸೂರಿನ ವೀರನಹೊಸಹಳ್ಳಿಗೆ ಗೂಡ್ಸ್ ವಾಹನದಲ್ಲಿ ಬಂದಿದ್ದರು. ಈ ವೇಳೆ ತಮ್ಮ ವಾಹನಕ್ಕೆ ಮ್ಯಾಟ್ ಖರೀದಿಸಲು ಮುರುಗೇಶ್ ರವರ ಅಂಗಡಿಗೆ ಹೋಗಿದ್ದರು. ಆಗ ಮ್ಯಾಟ್​ಗೆ 2,300 ರೂ ಬೆಲೆ ಹೇಳಿದಾಗ ನಂದೀಶ್ 2000ಕ್ಕೆ ಕೇಳಿದ್ದಾರೆ. ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.

ನಂತರ ಗೂಡ್ಸ್ ವಾಹನದಿಂದ ಅಲ್ಲಿಂದ ಹೊರಡುತ್ತಿದ್ದಾಗ ಮುರುಗೇಶ್ ಅವರು ಅಂಗಡಿಯಿಂದಲೇ ನಂದೀಶ್ ಮೇಲೆ ಕತ್ತರಿ ಎಸೆದಿದ್ದಾರೆ. ಬಳಿಕ ಬೈಕ್ ನಲ್ಲಿ ಕೆಲವರ ಜೊತೆ ಹಿಂಬಾಲಿಸಿ ಅಡ್ಡಗಟ್ಟಿ ಮತ್ತೆ ಕಿರಿಕ್ ಮಾಡಿದ್ದಾರೆ. ಈ ವೇಳೆ ಸಹಾಯಕ್ಕೆ ಬಂದ ರಮೇಶ್ ಮೇಲೂ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಸದ್ಯ ಗಾಯಗೊಂಡ ನಂದೀಶ್ ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಮುರುಗೇಶ್ ಜೋಗಿ ಸೇರಿದಂತೆ ಮೂವರ ವಿರುದ್ದ ಹುಣಸೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.