ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳೆದ 5 ವರ್ಷಗಳಿಂದ ಧರ್ಮದ ಬಗ್ಗೆ ವಿಷಕಾರುವ ಕೆಲಸ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಅವರನ್ನು ನಿಂದಿಸಿರುವ ಅವರ ವರ್ತನೆ ಖಂಡನಾರ್ಹ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರನ್ನು ಹುಚ್ಚ ಎಂದು ನಿಂದಿಸಿರುವ ಯತ್ನಾಳ, ರಾಜ್ಯದ ಜನ ಇವರ ನಡವಳಿಕೆಯಿಂದ ಏನು ಎನ್ನುತ್ತಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಆಗುವಂಥ ಎರಡು ಬಾರಿ ಅವಕಾಶ ಸಿಕ್ಕರೂ ಅಧಿಕಾರಕ್ಕಾಗಿ ಆಸೆ ಪಡದೇ ಮನಮೋಹನಸಿಂಗ್ ಅವರನ್ನು ಪ್ರಧಾನಿ ಮಾಡಿದ ತ್ಯಾಗಮಯಿ ಸೋನಿಯಾ ಗಾಂಧಿ. ಇಂಥ ನಾಯಕಿಯನ್ನು ಪಾಕಿಸ್ತಾನ ಏಜೆಂಟ್ ಎಂದು ನಿಂದಿಸಿರುವ ಯತ್ನಾಳಗೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಯತ್ನಾಳ ಕಾಂಗ್ರೆಸ್ ನಾಯಕರನ್ನು ನಿಂದಿಸಿದ್ದು ಮಾತ್ರವಲ್ಲದೇ, ಈ ಹಿಂದೆ ಸಚಿವ ಸೋಮಣ್ಣ, ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಅತ್ಯಂತ ಕೆಟ್ಟಪದ ಬಳಸಿ ನಿಂದಿಸಿದರು. ಬಳಿಕ ಎಲ್ಲರನ್ನೂ ಹೊಗಳಿದರು. ನಾಯಕನಾದವನು ಇಂಥ ಹೇಳಿಕೆ ನೀಡಲು ಸಾಧ್ಯವೆ ಎಂದು ಪ್ರಶ್ನಿಸಿದರು.
ಮತ್ತೊಂದೆಡೆ ಮುಸ್ಲಿಂ ಬಂಧುಗಳನ್ನು ಟೋಪಿ, ಗಡ್ಡ, ಬುರ್ಕಾ ಹಾಕಿದವರು ನನ್ನ ಕಛೇರಿಗೆ ಬರಬೇಡಿ ಎಂದು ತಾಕೀತು ಮಾಡಿದರು. ಆಗ ನಾನು ವಿಜಯಪುರ ನಗರದ ಮುಸ್ಲಿಂ ಸಮುದಾಯದ ಜನರು ಏನೇ ಕೆಲಸ ಇದ್ದರೂ ನನ್ನ ಕಛೇರಿಗೆ ಬನ್ನಿ ಎಂದು ಹೇಳಿದ್ದೆ ಎಂದು ನೆನಪಿಸಿದರು.
ಇವನಾರವ, ಇವ ನಮ್ಮವ ಎನ್ನಿ, ಹುಸಿಯ ನುಡಿಯಲುಬೇಡ, ಅನ್ಯರಿಗೆ ಅಸಹ್ಯ ಪಡಬೇಡ ಎಂದ ಬಸವಣ್ಣ ಅವರ ಹೆಸರು ಇರಿಸಿಕೊಂಡು ಬಸನಗೌಡ ಪಾಟೀಲ ಯತ್ನಾಳ ನಿತ್ಯವೂ ಬೆಳಿಗ್ಗೆಯಿಂದ ಸಂಜೆ ವರೆಗೆ ಬರೀ ಕೆಟ್ಟ ಮಾತುಗಳಿಂದಲೇ ಅನ್ಯರನ್ನು ನಿಂದಿಸುತ್ತಲೇ ಬಂದಿದ್ದಾರೆ. ಐದು ವರ್ಷದಲ್ಲಿ ಇಂಥ ಐದು ಸಾವಿರ ಅಸಭ್ಯ, ಅಶ್ಲೀಲ ಮಾತನಾಡಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಪರಮೇಶ್ವರ ಮೇಲೆ ಕಲ್ಲು ಎಸೆದಿರುವ ಕೃತ್ಯದಿಂದ ಪರಮೇಶ್ವರ ಅವರಿಗೆ ಜೀವಕ್ಕೆ ತೀವ್ರ ಆಘಾತಕಾರಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುತ್ತಿದೆ. ಬಬಲೇಶ್ವರ ಕ್ಷೇತ್ರದಲ್ಲಿ ನನ್ನ ಪರ ನನ್ನ ಪತ್ನಿ ಆಶಾ ಅವರು ಪ್ರಚಾರಕ್ಕೆ ಹೋದಾಗಲೂ ಹುಬನೂರ ಗ್ರಾಮದಲ್ಲಿ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ನಾಯಕತ್ವ ಮುಗಿದಿರುವ ಕಾರಣದಿಂದಲೇ ಇದೀಗ ಪ್ರಧಾನಿ ಮೋದಿ ಚುನಾವಣೆಯ ಈ ಹಂತದಲ್ಲಿ ರಾಜ್ಯಕ್ಕೆ ಪದೇ ಪದೇ ಬರುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರದ ಎರಡೂ ಎಂಜಿನ್ ಕೆಟ್ಟಿದ್ದು, ಸ್ಕ್ರ್ಯಾಪ್ ಸ್ಥಿತಿ ತಲುಪಿವೆ ಎಂದು ಕುಟುಕಿದರು.
ಬಿಜೆಪಿ ಪಕ್ಷವನ್ನು ಒಡೆದು, ಕೆಜೆಪಿ ಪಕ್ಷವನ್ನು ಕಡ್ಟಿ, ಬಿಜೆಪಿ ಪಕ್ಷದ ಸೋಲಿಗೆ ಕಾರಣವಾದ ಯಡಿಯೂರಪ್ಪ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ ಶಟ್ಟರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎನಿಸಿದೆ ಎಂದರು.
ಬಬಲೇಶ್ವರ ಕ್ಷೇತ್ರದ ಗೂಂಡಾಗಿರಿ ವರ್ತನೆಯಿಂದಲೇ ಜೀವನ ನಡೆಸಿರುವ ಬಿಜೆಪಿ ಅಭ್ಯರ್ಥಿ ಇದೀಗ ಕಣ್ಣೀರು ಹಾಕುವ ಹೊಸ ನಾಟಕ ಆರಂಭಿಸಿದ್ದಾರೆ ಎಂದು ಕುಟುಕಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ, ಎಐಸಿಸಿ ಚುನಾವಣಾ ಉಸ್ತುವಾರಿ ಪ್ರತಿ ಜೈಸ್ವಾಲ್ ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.