ಮನೆ ರಾಜಕೀಯ ಶಿಕ್ಷಕರ ಋಣ ತೀರಿಸುತ್ತೇನೆ: ಬಸವರಾಜ ಹೊರಟ್ಟಿ

ಶಿಕ್ಷಕರ ಋಣ ತೀರಿಸುತ್ತೇನೆ: ಬಸವರಾಜ ಹೊರಟ್ಟಿ

0

ಬೆಳಗಾವಿ(Belagavi): ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರಿಗೆ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡುತ್ತೇನೆ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 8ನೇ ಬಾರಿ ಗೆಲುವು ಸಾಧಿಸಿದ ಬಸವರಾಜ ಹೊರಟ್ಟಿ ಹೇಳಿದರು.

ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇತ್ತು. ಶಿಕ್ಷಕರ ಬೇಡಿಕೆ ಈಡೇರಿಕೆಗೆ ನಾನು ಸದಾ ಬದ್ದ. ಸಭಾಪತಿ ಆಗಿದ್ದರಿಂದ ಹೋರಾಟ ನಡೆಸಲು ಆಗಿರಲಿಲ್ಲ. ಈಗ ಮತ್ತಷ್ಟು ಹೋರಾಟ ನಡೆಸಲಿದ್ದೇನೆ ಎಂದರು.

ಮುಂದೆ ಸಭಾಪತಿ ಅಥವಾ ಸಚಿವ ಸ್ಥಾನ ಪಕ್ಷಕ್ಕೆ ಬಿಟ್ಟ ವಿಷಯ ಎಂದು ಪ್ರಶ್ನೆಯೊಂದಕ್ಕೆ ಹೇಳಿದರು.

ಪಶ್ಚಿಮ ಶಿಕ್ಷಕರ ಕ್ಷೇತ್ರ

ಬಸವರಾಜ ಹೊರಟ್ಟಿ – 7076

ಬಸವರಾಜ ಗುರಿಕಾರ- 3314

ಹಿಂದಿನ ಲೇಖನಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾಗಿ ಬಿ.ನಿಂಗರಾಜು ನೇಮಕ
ಮುಂದಿನ ಲೇಖನಮೈಸೂರು: ದಕ್ಷಿಣ ಪದವೀಧರರ ‌ಕ್ಷೇತ್ರ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಲ್ಪ ಮುನ್ನಡೆ