ಮನೆ ರಾಜ್ಯ ರಾಮನಗರದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ: ಗಂಭೀರ ಗಾಯ

ರಾಮನಗರದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ: ಗಂಭೀರ ಗಾಯ

0

ರಾಮನಗರ(Ramanagara): ಇಂದು ಬೆಳ್ಳಂಬೆಳ್ಳಗ್ಗೆ ಏಕಾಏಕಿ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದ ಬಿಳಗುಂಬ ಗ್ರಾಮದಲ್ಲಿ ನಡೆದಿದೆ.

 ಗ್ರಾಮದ ಹುನುಮಂತಯ್ಯ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ.

ಬೆಳಗ್ಗೆ ಎಂದಿನಂತೆ ಕೊಟ್ಟಿಗೆ ಕಸ ಸುರಿಯಲು ಮನೆಯ ಹಿಂಭಾಗ ಹೋದ ಸಂದರ್ಭದಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ ಈ ಕರಡಿ ಏಕಾಏಕಿ ಇವರ ಮೇಲೆ ಬಿದ್ದಿದೆ.

ಈ ವೇಳೆ, ಕರಡಿ ಹನುಮಂತಯ್ಯ‌ನ ಮೇಲೆ ತೀವ್ರ ಸ್ವರೂಪದಲ್ಲಿ ಗಾಯಗೊಳಿಸಿದ್ದು, ಕೂಡಲೇ ಅವರನ್ನು ರಾಮನಗರ ‌ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಕರಡಿ ಹಿಡಿದು ಕಾಡಿಗೆ ಕಳುಹಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

ಹಿಂದಿನ ಲೇಖನಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ?: ಕಾಂಗ್ರೆಸ್ ಪ್ರಶ್ನೆ
ಮುಂದಿನ ಲೇಖನದೀಪಾವಳಿಯ ಮೊದಲ ದಿನದಂದೇ ಪಟಾಕಿಯಿಂದ 11 ಮಂದಿಗೆ ಗಾಯ