ಮನೆ ರಾಜಕೀಯ ರವೀಂದ್ರನಾಥ್ ರಾಜೀನಾಮೆ ಹಿಂದೆ ನನ್ನ ಕೈವಾಡ ಇಲ್ಲ: ಎಂ.ಪಿ ರೇಣುಕಾಚಾರ್ಯ

ರವೀಂದ್ರನಾಥ್ ರಾಜೀನಾಮೆ ಹಿಂದೆ ನನ್ನ ಕೈವಾಡ ಇಲ್ಲ: ಎಂ.ಪಿ ರೇಣುಕಾಚಾರ್ಯ

0

ದಾವಣಗೆರೆ(Davanagere):  ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿರುವುದರ ಹಿಂದೆ ನನ್ನ ಕೈವಾಡ ಇಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ದಾವಣಗೆರೆ ಹೊನ್ನಾಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಯಾವುದೇ ನಕಲಿ ಜಾತಿ ಪ್ರಮಾಣ ಪತ್ರ ಪಡೆದಿಲ್ಲ. ಡಿಕೆ ಶಿವಕುಮಾರ್ ನನ್ನ ಮೇಲೆ ಆರೋಪ ಮಾಡುತ್ತಾರೆ.  ರವೀಂದ್ರನಾಥ್ ರಾಜೀನಾಮೆಗೂ ನನಗೂ ಯಾವುದೇ ಸಂಬಂಧವಿಲ್ಲ  ಸುಳ್ಳು ಹೇಳಿದ್ದರೇ ಸಿಎಂ ಆಗಬಹುದು ಎಂಬ ಭ್ರಮೆಯಲ್ಲಿ ಡಿ.ಕೆ ಶಿವಕುಮಾರ್ ಇದ್ದಾರೆ ಎಂದು ಟಾಂಗ್ ನೀಡಿದರು.

ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ ತಮ್ಮ ಪುತ್ರಿಗೆ ನಕಲಿ ಜಾತಿ ಪ್ರಮಾಣ ಪತ್ರ ಮಾಡಿಸಿಕೊಂಡಿರುವ ಆರೋಪ ಕೇಳಿ ಬಂದಿತ್ತು.  ಈ ನಡುವೆ ರವೀಂದ್ರನಾಥ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ನಂತರ ಐಪಿಎಸ್ ಹುದ್ದೆಗೆ ರವೀಂದ್ರನಾಥ್ ರಾಜೀನಾಮೆ ನೀಡಿದ್ದರು.

ಹಿಂದಿನ ಲೇಖನರಣಹದ್ದುಗಳ ಸಂರಕ್ಷಣೆ: ಒಡಂಬಡಿಕೆಗೆ ಮೈಸೂರು ವಿವಿ ಅರಣ್ಯ ಇಲಾಖೆ ಸಹಿ
ಮುಂದಿನ ಲೇಖನಕಾಂಗ್ರೆಸ್ ನಲ್ಲಿ ನನಗೆ ಅವಕಾಶ ನೀಡಿದವರು ರಾಹುಲ್ ಗಾಂಧಿ: ನಟಿ ರಮ್ಯಾ