ಬೆಳಗಾವಿ: ವರ್ಕ್ ಆರ್ಡರ್ ಪಡೆದು ಕಾಮಗಾರಿ ಮಾಡಿದರೂ ಬಿಲ್ ಆಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಮುಂದೆಯೇ ಬೇಸತ್ತು ವಿಷ ಸೇವಿಸಿದ್ದಾರೆ.
ಗುತ್ತಿಗೆದಾರ ನಾಗಪ್ಪ ಬಂಗಿ ಎನ್ನುವವರು ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಚೇರಿ ಬಳಿ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ S.S.ಸೊಬರದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾರೆ. ಸದ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಂದು ವಿಷದ ಬಾಟಲ್ ಜೊತೆಗೆ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಬಂದಿದ್ದ ನಾಗಪ್ಪ ಬಂಗಿ ಅವರು ಬೇಜವಾಬ್ದಾರಿ ತೋರಿದ ಅಧಿಕಾರಿಗಳು ಬರದಿದ್ರೇ ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ್ದರು. ಕುಟುಂಬ ಸಮೇತ ಆಗಮಿಸಿ ಕಚೇರಿ ಮುಂದೆ ಧರಣಿ ಕುಳಿತಿದ್ದರು. ಅಧಿಕಾರಿಗಳಿಂದ ಸ್ಪಂದನೆ ಸಿಗದ ಕಾರಣ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಾಗಪ್ಪ ಅವರು 2022ರಲ್ಲಿ ಹಲಗಾ ಗ್ರಾಮದಿಂದ ತಿಗಡಿ ಗ್ರಾಮದ ವರೆಗೆ ರಸ್ತೆ ಮಾಡಿದ್ದರು. ಇಲಾಖೆಯು ನಿರ್ಮಿಸಿದ್ದ ರಸ್ತೆ ನಿರ್ವಹಣೆಗೆ ವರ್ಕ್ ಆರ್ಡರ್ ಕೊಟ್ಟಿತ್ತು. 6 ಲಕ್ಷ 50 ಸಾವಿರ ವೆಚ್ಚದಲ್ಲಿ ಈಗಾಗಲೇ ಕಾಮಗಾರಿ ಮುಗಿಸಿದ್ದು ಕಾಮಗಾರಿ ಮುಗಿದರೂ ಬಿಲ್ ನೀಡದೆ ಅಧಿಕಾರಿಗಳು ಸತಾಯಿಸುತ್ತಿರುವ ಹಿನ್ನೆಲೆ ಎಇಇ ರಾಮೇಶ್ ಹೆಗಡೆ, ಎಇಇ ಬಸವರಾಜ್ ಹಲಗಿ ವಿರುದ್ಧ ಆಕ್ರೋಶ ಹೊರ ಹಾಕಿ ವಿಷ ಸೇವಿಸಿದ್ದಾರೆ.
ಮತದಾರನಿಗೆ YSR ಕಾಂಗ್ರೆಸ್ ಶಾಸಕನಿಂದ ಕಪಾಳ ಮೋಕ್ಷ…
ಮೋದಿ ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ರು
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.