ಬಳ್ಳಾರಿ: ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿದ್ದಾರೆ.
ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತ ದುರ್ದೈವಿಗಳು.
ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್ ನಲ್ಲಿ ಸಮಸ್ಯೆ ಕಂಡು ಬಂದಿತ್ತು. ಪೈಪ್ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್ ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ. ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ.
ತೋರಣಗಲ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.