ಬೇಲೂರು (ಹಾಸನ): ಇಲ್ಲಿನ ಚನ್ನಕೇಶವ ಸ್ವಾಮಿ ದೇವಸ್ಥಾನದ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಚನ್ನಕೇಶವಸ್ವಾಮಿ ದೇಗುಲದಲ್ಲಿ ಪೂಜಾ ವಿಧಿವಿಧಾನಗಳನ್ನು ಪೂರೈಸಿ, ರಥದ ನಾಲ್ಕು ಚಕ್ರಗಳಿಗೆ ಅನ್ನಬಲಿ ನೀಡಿ ನಂತರ ದೇಗುಲದ ಒಳಗೆ ಯಾತ್ರಾದಾನ ಸೇವೆ ನಡೆಯಿತು.
ನಂತರ ಸೌಮ್ಯನಾಯಕಿ, ರಂಗನಾಯಕಿ ಸಮೇತ ದೇವರ ಉತ್ಸವ ಮೂರ್ತಿಯನ್ನು ದೇಗುಲದ ಗೋಪುರದ ಬಾಗಿಲಿನಿಂದ ಹೊರ ತಂದು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸಲಾಯಿತು.
ಕೇಸರಿ ಮಂಟಪದಡಿ ಸೇವೆ ಸಲ್ಲಿಸಿ ರಥದಲ್ಲಿ ಕೂರಿಸಲಾಯಿತು. ನಂತರ ರಥ ನಿರೀಕ್ಷೆ, ಸಂಪ್ರೋಕ್ಷಣೆ, ಮಂಗಳಾರತಿ ನಡೆಸಿ, ರಥ ಮುಂಭಾಗ ಇರಿಸಿದ್ದ ಬಾಳೆಕಂದನ್ನು ಕತ್ತರಿಸಿ ರಥಕ್ಕೆ ಬಲಿ ಕೊಡಲಾಯಿತು.
ಸಂಪ್ರದಾಯದಂತೆ ದೊಡ್ಡಮೇದೂರಿನ ಮೌಲ್ವಿ ಸೈಯದ್ ಸಜ್ಜಾದ್ ಬಾಷಾ ಉರ್ದು ಭಾಷೆಯಲ್ಲಿ ದೇವರಿಗೆ ವಂದನೆ ಸಲ್ಲಿಸಿದರು.
ರಥವನ್ನು ಮೂಲಸ್ಥಾನದಿಂದ ಎಳೆದು ಗೋಪುರದ ಆಗ್ನೇಯ(ಭಸ್ಮಾಸುರ ಮೂಲೆ) ದಿಕ್ಕಿನಲ್ಲಿರುವ ಬಯಲು ರಂಗಮಂದಿರದ ಬಳಿ ತಂದು ನಿಲ್ಲಿಸಲಾಯಿತು.
ದೂರದ ಊರುಗಳಿಂದ ಬಂದಿದ್ದ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ರಥಕ್ಕೆ ಬಾಳೆಹಣ್ಣು ಅರ್ಪಿಸಿದರು. ಜನರ ಸಂಖ್ಯೆ ಹೆಚ್ಚಾಗಿದ್ದು, ರಥ ಸಾಗುತ್ತಿದ್ದಂತೆಯೇ ಜೈಕಾರ ಮುಗಿಲು ಮುಟ್ಟಿತು.
ಸಂಪ್ರದಾಯದಂತೆ ದೇವಸ್ಥಾನದ ಮೆಟ್ಟಿಲು ಬಳಿ ಮೇದೂರು ಖಾಜಿ ಸಾಹೇಬರಿಂದ ದೇವರಿಗೆ ವಂದನೆ (ಕುರಾನ್ ಪಠಣ) ಸಲ್ಲಿಸಲಾಯಿತು.
ರಥದ ಮುಂದೆ ಕುರಾನ್ ಪಠಣಕ್ಕೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿತ್ತು. ನಂತರ ಧಾರ್ಮಿಕ ದತ್ತಿ ಇಲಾಖೆಯಿಂದ ಆಗಮ ಪಂಡಿತರು ಬಂದು ದಾಖಲೆಗಳನ್ನು ಪರಿಶೀಲಿಸಿದ್ದರು. ಅವರ ವರದಿಯ ಆಧಾರದಲ್ಲಿ ದೇವಸ್ಥಾನದ ಮೆಟ್ಟಿಲುಗಳ ಬಳಿ ಕುರಾನ್ ಪಠಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ದೇಗುಲದ ವತಿಯಿಂದ, ಸಂಘ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಮಜ್ಜಿಗೆ, ಪಾನಕ, ಉಪಾಹಾರವನ್ನು ನೀಡಲಾಯಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.